23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ, ಹಾಗೂ ಮಲೆಕುಡಿಯ ಸಂಘ (ರಿ.) ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಜೇನು ಕುರುಬ, ಬೆಟ್ಟ ಕುರುಬ, ಯರವ, ಸೋಲಿಗ, ಕೊರಗ, ಹಸಲರು, ಗೊಂಡ, ಮಲೆಕುಡಿಯ, ಗೌಡ್ಲು, ಸಿದ್ದಿ, ಹಕ್ಕಿಪಿಕ್ಕಿ ಡೋಂಗ್ರೀ-ಗರಾಸಿಯಾ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ ನ 4 ಮತ್ತು5 ರಂದು ಬೆಳ್ತಂಗಡಿ ಕೊಯ್ಯೂರು ಗ್ರಾಮದ ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯ ಭವನದಲ್ಲಿ ಕಾರ್ಯಾಗಾರ ನಡೆಯಲಿದೆ.


ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ. ಜಿಲ್ಲೆಯ ಯೋಜನಾ ಸಮನ್ವಯಾಧಿಕಾರಿ, ಶಿವಕುಮಾರ್‌ರವರು ಕಾರ್ಯಕ್ರವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಅಧ್ಯಕ್ಷರು ಪುಟ್ಟ ಬಸವಯ್ಯ, ಎಚ್.ಡಿ. ಕೋಟೆ ಮೈಸೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಸೋಲಿಗ ಅಭಿವೃದ್ಧಿ ಸಂಘಟನೆಯ ಡಾ. ಸಿ. ಮಾದೇಗೌಡ ವಿಷಯ ಮಂಡನೆ ಮಾಡಲಿದ್ದಾರೆ.

Related posts

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!