22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ, ಹಾಗೂ ಮಲೆಕುಡಿಯ ಸಂಘ (ರಿ.) ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಜೇನು ಕುರುಬ, ಬೆಟ್ಟ ಕುರುಬ, ಯರವ, ಸೋಲಿಗ, ಕೊರಗ, ಹಸಲರು, ಗೊಂಡ, ಮಲೆಕುಡಿಯ, ಗೌಡ್ಲು, ಸಿದ್ದಿ, ಹಕ್ಕಿಪಿಕ್ಕಿ ಡೋಂಗ್ರೀ-ಗರಾಸಿಯಾ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ ನ 4 ಮತ್ತು5 ರಂದು ಬೆಳ್ತಂಗಡಿ ಕೊಯ್ಯೂರು ಗ್ರಾಮದ ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯ ಭವನದಲ್ಲಿ ಕಾರ್ಯಾಗಾರ ನಡೆಯಲಿದೆ.


ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ. ಜಿಲ್ಲೆಯ ಯೋಜನಾ ಸಮನ್ವಯಾಧಿಕಾರಿ, ಶಿವಕುಮಾರ್‌ರವರು ಕಾರ್ಯಕ್ರವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಅಧ್ಯಕ್ಷರು ಪುಟ್ಟ ಬಸವಯ್ಯ, ಎಚ್.ಡಿ. ಕೋಟೆ ಮೈಸೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಸೋಲಿಗ ಅಭಿವೃದ್ಧಿ ಸಂಘಟನೆಯ ಡಾ. ಸಿ. ಮಾದೇಗೌಡ ವಿಷಯ ಮಂಡನೆ ಮಾಡಲಿದ್ದಾರೆ.

Related posts

ಪ್ರದೀಪ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Suddi Udaya

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ವತಿಯಿಂದ ಸುಹಾಸ್ ಶೆಟ್ಟಿಗೆ ನುಡಿ ನಮನ

Suddi Udaya
error: Content is protected !!