25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

ಬೆಳ್ತಂಗಡಿ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ, ಹಾಗೂ ಮಲೆಕುಡಿಯ ಸಂಘ (ರಿ.) ದ.ಕ. ಜಿಲ್ಲೆ ಇದರ ಸಹಯೋಗದೊಂದಿಗೆ ಜೇನು ಕುರುಬ, ಬೆಟ್ಟ ಕುರುಬ, ಯರವ, ಸೋಲಿಗ, ಕೊರಗ, ಹಸಲರು, ಗೊಂಡ, ಮಲೆಕುಡಿಯ, ಗೌಡ್ಲು, ಸಿದ್ದಿ, ಹಕ್ಕಿಪಿಕ್ಕಿ ಡೋಂಗ್ರೀ-ಗರಾಸಿಯಾ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ ನ 4 ಮತ್ತು5 ರಂದು ಬೆಳ್ತಂಗಡಿ ಕೊಯ್ಯೂರು ಗ್ರಾಮದ ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯ ಭವನದಲ್ಲಿ ಕಾರ್ಯಾಗಾರ ನಡೆಯಲಿದೆ.


ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ದ.ಕ. ಜಿಲ್ಲೆಯ ಯೋಜನಾ ಸಮನ್ವಯಾಧಿಕಾರಿ, ಶಿವಕುಮಾರ್‌ರವರು ಕಾರ್ಯಕ್ರವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಅಧ್ಯಕ್ಷರು ಪುಟ್ಟ ಬಸವಯ್ಯ, ಎಚ್.ಡಿ. ಕೋಟೆ ಮೈಸೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಸೋಲಿಗ ಅಭಿವೃದ್ಧಿ ಸಂಘಟನೆಯ ಡಾ. ಸಿ. ಮಾದೇಗೌಡ ವಿಷಯ ಮಂಡನೆ ಮಾಡಲಿದ್ದಾರೆ.

Related posts

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya
error: Content is protected !!