24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

ಶಿಶಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ .ಟ್ರಸ್ಟ್ ಬೆಳ್ತಂಗಡಿ ತಾಲೂಕು ಹೊಲಿಗೆ ತರಬೇತಿ ಕೇಂದ್ರವು ನ.2 ರಂದು ಶಿಶಿಲ ಗ್ರಾಮದ ನಾಗನಡ್ಕ ಸಮುದಾಯ ಭವನದಲ್ಲಿ ಉದ್ಘಾಟಿಸಲ್ಪಟ್ಟಿತು.

ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆಯನ್ನು ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ್ ಮೂಡೆತ್ತಾಯ ನೆರವೇರಿಸಿ ಗ್ರಾಮೀಣ ಭಾಗದ ಮಹಿಳೆಯರು ಹೊಲಿಗೆ ತರಬೇತಿಯನ್ನು ಪಡೆದು ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಳ್ಳಲು ಅವಕಾಶವನ್ನು ಮಾತೃಶ್ರೀ ಅಮ್ಮನವರು ನೀಡಿದ್ದು ಇದರ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು. ಶಿಶಿಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧೀನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ಶುಭ ಹಾರೈಸಿದರು.

ಸಭೆಯಲ್ಲಿ ಸಮನ್ವಯಾಧಿಕಾರಿಗಳಾದ ಮಧುರ ಪ್ರಾಸ್ತವಿಕವಾಗಿ ಮಾತನಾಡಿದರು.

ಮೇಲ್ವಿಚಾರಕರಾದ ಶಶಿಕಲಾ ಅವರು ಒಬ್ಬ ಹೆಣ್ಣು ಸ್ವಾವಲಂಬಿಯಾಗಿ ಬದುಕುವುದರ ಬಗ್ಗೆ ಮತ್ತು ಹೊಲಿಗೆ ಕಲಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು. ಹೊಲಿಗೆ ತರಬೇತಿಯ ಶಿಕ್ಷಕಿಯಾದ ಗೀತಾ ರವರು ತರಬೇತಿಯ ನಿಯಮದ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿ ನೀಡಿದರು. ವೇದಿಕೆಯಲ್ಲಿ ಹೇವಾಜೆ ಒಕ್ಕೂಟ ಅಧ್ಯಕ್ಷರಾದ ಕೃಷ್ಣಪ್ಪರವರು ಉಪಸ್ಥಿತರಿದ್ದರು. ಹೇವಾಜೆ ಸೇವಾಪ್ರತಿನಿಧಿಯಾದ ರಶ್ಮಿತಾರವರು ಸ್ವಾಗತಿಸಿ, ಶಿಶಿಲ ಸೇವಾಪ್ರತಿನಿಧಿ ಗಾಯತ್ರಿಯವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya
error: Content is protected !!