27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

ಶಿಶಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ .ಟ್ರಸ್ಟ್ ಬೆಳ್ತಂಗಡಿ ತಾಲೂಕು ಹೊಲಿಗೆ ತರಬೇತಿ ಕೇಂದ್ರವು ನ.2 ರಂದು ಶಿಶಿಲ ಗ್ರಾಮದ ನಾಗನಡ್ಕ ಸಮುದಾಯ ಭವನದಲ್ಲಿ ಉದ್ಘಾಟಿಸಲ್ಪಟ್ಟಿತು.

ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆಯನ್ನು ಶಿಶಿಲೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ್ ಮೂಡೆತ್ತಾಯ ನೆರವೇರಿಸಿ ಗ್ರಾಮೀಣ ಭಾಗದ ಮಹಿಳೆಯರು ಹೊಲಿಗೆ ತರಬೇತಿಯನ್ನು ಪಡೆದು ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಳ್ಳಲು ಅವಕಾಶವನ್ನು ಮಾತೃಶ್ರೀ ಅಮ್ಮನವರು ನೀಡಿದ್ದು ಇದರ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು. ಶಿಶಿಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧೀನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮ ಶುಭ ಹಾರೈಸಿದರು.

ಸಭೆಯಲ್ಲಿ ಸಮನ್ವಯಾಧಿಕಾರಿಗಳಾದ ಮಧುರ ಪ್ರಾಸ್ತವಿಕವಾಗಿ ಮಾತನಾಡಿದರು.

ಮೇಲ್ವಿಚಾರಕರಾದ ಶಶಿಕಲಾ ಅವರು ಒಬ್ಬ ಹೆಣ್ಣು ಸ್ವಾವಲಂಬಿಯಾಗಿ ಬದುಕುವುದರ ಬಗ್ಗೆ ಮತ್ತು ಹೊಲಿಗೆ ಕಲಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು. ಹೊಲಿಗೆ ತರಬೇತಿಯ ಶಿಕ್ಷಕಿಯಾದ ಗೀತಾ ರವರು ತರಬೇತಿಯ ನಿಯಮದ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿ ನೀಡಿದರು. ವೇದಿಕೆಯಲ್ಲಿ ಹೇವಾಜೆ ಒಕ್ಕೂಟ ಅಧ್ಯಕ್ಷರಾದ ಕೃಷ್ಣಪ್ಪರವರು ಉಪಸ್ಥಿತರಿದ್ದರು. ಹೇವಾಜೆ ಸೇವಾಪ್ರತಿನಿಧಿಯಾದ ರಶ್ಮಿತಾರವರು ಸ್ವಾಗತಿಸಿ, ಶಿಶಿಲ ಸೇವಾಪ್ರತಿನಿಧಿ ಗಾಯತ್ರಿಯವರು ಧನ್ಯವಾದವಿತ್ತರು.

Related posts

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ರೆಖ್ಯ: ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಗ್ರಾಮಸ್ಥರಿಂದ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ನಿರ್ಧಾರ

Suddi Udaya

ಸುಲ್ಕೇರಿ: ಪಿ‌ಎಂ ಜನ್ ಮನ್ ಯೋಜನೆಯಡಿ ರೂ. 6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ‌.ಬ್ರಿಜೇಶ್ ಚೌಟರವರಿಂದ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಬೆಳ್ತಂಗಡಿ ಪ.ಪಂ., ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಗಾಂಧಿ ಜಯಂತಿ ಪ್ರಯುಕ್ತ “ಸ್ವಚ್ಛತೆಯತ್ತ ನಮ್ಮ ಚಿತ್ತ”

Suddi Udaya
error: Content is protected !!