July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾಚಾರು ಕೆಂಪನೊಟ್ಟು ವಿವಾಹಿತ ಮಹಿಳೆ ಶಶಿಕಲಾ ಶವ ಬಾವಿಯಲ್ಲಿ ಪತ್ತೆ : ಹಲವಾರು ಶಂಕೆ : ಬಂಟ್ವಾಳ ಡಿವೈಎಸ್‌ಪಿ, ಸ್ಥಳಕ್ಕೆ ಆಗಮಿಸಿ ತನಿಖೆ

ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಚಾರು ಕೆಂಪನೊಟ್ಟು ಎಂಬಲ್ಲಿ ವಿವಾಹಿತ ಮಹಿಳೆಯೋವ೯ರ ಶವಶುಕ್ರವಾರ ಬೆಳಗ್ಗೆ ಬಾವಿಯಲ್ಲಿ ಪತ್ತೆಯಾಗಿದ್ದು, ಹಲವಾರು ಸಂಶಯಗಳಿಗೆ ಕಾರಣವಾಗಿದೆ. ‌ಬೆಳಾಲು ಗ್ರಾಮದ ಕೆಂಪನೊಟ್ಟು ಜ್ಯೋತಿನಗರದ ವಿವಾಹಿತ ಮಹಿಳೆ ಶಶಿಕಲಾ ನಾಯ್ಕ (25ವ) ಎಂಬವರು ಸಂಶಯಾಸ್ಪದವಾಗಿ ಸಾವನ್ನಪ್ಪಿದವರು. ಕೆಂಪನೊಟ್ಟು ಎಂಬಲ್ಲಿ ತೋಟವೊಂದರ ಮನೆಯಲ್ಲಿ ಪತಿ ಪತ್ನಿ ಏಕೈಕ ಮಗಳ ಜೊತೆಕೆಲಸ ಮಾಡಿಕೊಂಡಿದ್ದು ಅಲ್ಲೇ ವಾಸ್ತವ್ಯವಿದ್ದರು. ಗುರುವಾರ ರಾತ್ರಿ ದಂಪತಿ ಮಾತ್ರ ಮನೆಯಲ್ಲಿ ಇದ್ದರೆನ್ನಲಾಗಿದೆ.

ಬೆಳಗ್ಗೆ ಪತಿ ಸುಧಾಕರ ನಾಯ್ಕ ಅವರು ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗಿದ್ದು ವಾಪಾಸು ಬಂದವರೇ ತನ್ನ ಪತ್ನಿಯ ಶವ ಬಾವಿಯಲ್ಲಿರುವುದಾಗಿ ಪೊಲೀಸರಿಗೆ ಮಾಹಿತಿ‌‌ ನೀಡಿದ್ದರು. ವಿಚಾರ ಹೊರಗೆ ಗೊತ್ತಾಗುತ್ತಿರುವಂತೆಯೇ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನ‌ ಜಮಾಯಿಸಿದ್ದರು. ಆಕೆಯೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೇ ಅಥವಾ ಇನ್ನೇನಾದರೂ ನಡೆದಿದೆಯೇ ಎಂಬ ಬಗ್ಗೆ ಅನುಮಾನವೂ ವ್ಯಕ್ತವಾಗಿದೆ.

ಸ್ಥಳಕ್ಕೆ ಬಂಟ್ವಾಳ ಡಿವೈಎಸ್‌ಪಿ, ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ನಾಗೇಶ್ ಕದ್ರಿ, ಧರ್ಮಸ್ಥಳ ಸಬ್ ಇನ್ಸೆಕ್ಟರ್ ಅನಿಲ್ ಕುಮಾರ್ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕಾರ್ಯಕರ್ತರು ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತುವಲ್ಲಿ ಪೊಲೀಸರಿಗೆ ನೆರವಾದರು. ಸ್ಥಳಕ್ಕೆ ವಿಧಿ‌ವಿಜ್ಞಾನ ಪ್ರಯೋಗಾಲಯದ (ಎಫ್.ಎಸ್.ಎಲ್) ಅಧಿಕಾರಿಗಳು ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ.

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಶಿಶಿಲ: ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಸಾವಿರಾರು ಮೀನುಗಳ ಮಾರಣ ಹೋಮ: ಮೈಲುತುತ್ತು ಬಳಸಿ ಮೀನು ಹಿಡಿಯಲು ಯತ್ನಿಸಿದ ಕಿಡಿಗೇಡಿಗಳು

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!