September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮವು ನ.3 ರಂದು ಸೌತಡ್ಕ ದೇವಸ್ಥಾನದಲ್ಲಿ ನಡೆಯಿತು.

ರೂ. 9.98 ಲಕ್ಷ ವೆಚ್ಚದಲ್ಲಿ ಕೆನರಾ ಬ್ಯಾಂಕ್ ನ ಅನುದಾನದಿಂದ ನೂತನವಾಗಿ ನಿರ್ಮಾಣಗೊಳ್ಳಲಿರುವ ಸೇವಾ ಕೌಂಟರ್ ಕಟ್ಟಡ ಕಾಮಗಾರಿಯ ಶಿಲಾನ್ಯಾಸ ಹಾಗೂ ದೇವಳದ ಭಕ್ತರಾದ ಉದಯರಾಜ್ ಪೆರ್ಮುದೆ ಇವರ ಸೇವಾರ್ಥ ರೂ.5 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನವಾದ ಶಿಲಾಮಯ ಅಶ್ವತ್ಥ ಕಟ್ಟೆ ಕಾಮಗಾರಿಯ ಶಿಲಾನ್ಯಾಸವನ್ನು ದೇವಸ್ಥಾನದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಹಾಗೂ ಸುಬ್ರಹ್ಮಣ್ಯ ತೋಡ್ತಿಲ್ಲಾಯ ನೇತೃತ್ವದಲ್ಲಿ ನೆರವೇರಿಸಲಾಯಿತು.

ಸಭಾ ಕಾರ್ಯಕ್ರಮದಲ್ಲಿ ರೂ. 25,000/- ಕೊಕ್ಕಡ ಕೆನರಾ ಬ್ಯಾಂಕ್‌ನ (CSR FUND) ಅನುದಾನದಿಂದ ಸೌತಡ್ಕ “ಶಿಶು ಮಂದಿರದ ಮಕ್ಕಳಿಗೆ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಕೆನರಾ ಬ್ಯಾಂಕಿನ ನಿವೃತ್ತ ಡಿಜಿಎಮ್ ಉದಯ ಭಟ್, ಕೊಕ್ಕಡ ಬ್ಯಾಂಕಿನ ಮಾನೇಜರ್ ಅಂಕಿತ್, ಎಜಿಎಮ್ ನರೇಂದ್ರ ರೆಡ್ಡಿ, ನೆಲ್ಯಾಡಿ ಕೆನರಾ ಬ್ಯಾಂಕಿನ ಮಾನೇಜರ್ ವಿಪಿನ್, ಉದಯ್ ರಾಜ್ ಪೆರ್ಮುದೆ , ಆರ್.ಎಸ್ ಎಸ್ ಮುಖಂಡ ಕೃಷ್ಣ ಭಟ್ , ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಬ್ಯಾಂಕಿನ ಕುಶಾಲಪ್ಪ ಗೌಡ, ಕೊಕ್ಕಡ ಗ್ರಾ,ಪಂ. ಅಧ್ಯಕ್ಷೆ ಬೇಬಿ , ಉಪಾಧ್ಯಕ್ಷ ಪ್ರಭಾಕರ, ಸದಸ್ಯರು, ವ್ಯವಸ್ಥಾಪನ ಸಮಿತಿಯ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಸ್ವಾಗತಿಸಿದರು. ಪುರಂದರ ಕೆ ಕಡಿರ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಭಯೋತ್ಪಾದಕ ಮನಸ್ಸುಗಳು ನಿರ್ನಾಮವಾಗಿ ಶಾಂತಿ ನೆಲೆಸಲಿ : ನಿರಂಜನ್ ಜೈನ್ ಕುದ್ಯಾಡಿ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ,ಸಾಧಕ ರೈತರಿಗೆ,ವಿಧ್ಯಾರ್ಥಿಗಳಿಗೆ ಸನ್ಮಾನ,ಪ್ರತಿಭಾ ಪುರಸ್ಕಾರ : 455.79 ಕೋಟಿ ವ್ಯವಹಾರ,ರೂ1.62 ಕೋಟಿ ಲಾಭ,ಸದಸ್ಯರಿಗೆ ಶೇ.15% ಡಿವಿಡೆಂಟ್ ಘೋಷಣೆ: ಸಹಕಾರಿಗಳಿಗೆ ಅನುಕೂಲವಾಗುವಂತೆ ಪಡಿತರವನ್ನು ರಾತ್ರಿಯವರೆಗೆ ವಿತರಣೆ :ಜೋಯೆಲ್ ಮೆಂಡೋನ್ಸ

Suddi Udaya

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya
error: Content is protected !!