September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

ಬಳಂಜ: ಕಳೆದ ಕೆಲ ಸಮಯಗಳಿಂದ ನಾಲ್ಕೂರು ಗ್ರಾಮದ ಬೊಳ್ಳಾಜೆ,ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆಯ ಹೆಜ್ಜೆಗುರುತು ಕಾಣಸಿಕ್ಕಿದ್ದು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು ಚಿರತೆಯ ಸೆರೆಗಾಗಿ ಬೋನ್ ಅಳವಡಿಸಲಾಗಿದೆ.

ಕೆಲವು ಸಮಯದಿಂದ ಬಳಂಜದಲ್ಲಿ ಚಿರತೆ ಕಾಣ ಸಿಕ್ಕಿದ್ದು ಚಿರತೆಯ ಸೆರೆಗಾಗಿ ಹಲವಾರು ಬಾರಿ ಬೋನ್ ಅಳವಡಿಸಲಾಗಿತ್ತು. ಆದರೆ ಬೋನ್ ಗೆ ಚಿರತೆ ಬೀಳಲಿಲ್ಲ.ಇತ್ತಿಚೆಗೆ ನಾಲ್ಕೂರು ಗ್ರಾಮದ ಬೊಳ್ಳಾಜೆ ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಓಡಾಟ ಮಾಡಿದ ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿದೆ.

ಅದಕ್ಕನುಗುಣವಾಗಿ ತಿಂಗಳ ಹಿಂದೆ ಈ ಭಾಗದಲ್ಲಿ ಹಲವಾರು ನಾಯಿಗಳು ಕಾಣೆಯಾಗಿದ್ದವು, ಈ ಬಗ್ಗೆ ಅಳದಂಗಡಿ ಉಪ ವಲಯಾರಣ್ಯಧಿಕಾರಿ ಸುರೇಶ್ ಗೌಡರವರಿಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿ ಪುಣ್ಕೆದೊಟ್ಟು ಪರಿಸರದಲ್ಲಿ ಬೋನ್ ಅಳವಡಿಸಿದ್ದಾರೆ.

Related posts

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ, ಭಜನಾ ಸಂಕೀರ್ತನೆ ಉದ್ಘಾಟನೆ

Suddi Udaya
error: Content is protected !!