September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

ಬೆಳ್ತಂಗಡಿ : ಕರ್ನಾಟಕದಲ್ಲಿರುವ ಎಲ್ಲಾ ಆಭರಣ ಜ್ಯುವೆಲರಿ ಮಳಿಗೆ ಸಂಸ್ಥೆ ಮೇಲೆ ಅ.31 ರಿಂದ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದರು. ಬೆಳ್ತಂಗಡಿಯ ಆಭರಣ ಜ್ಯುವೆಲರಿ ಶಾಪ್ ನಲ್ಲಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ನ.4 ಬೆಳಗ್ಗಿನ ಜಾವ 2:30 ಕ್ಕೆ ಬೆಂಗಳೂರು ಐಟಿ ಕಚೇರಿಗೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಭರಣಿ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಎರಡು ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶ, ತಮಿಳುನಾಡು, ಕೊಚ್ಚಿ ಸೇರಿದಂತೆ ಒಂಭತ್ತು ಜನ ಅಧಿಕಾರಿಗಳು ಅ.31 ರಂದು ಬೆಳಗ್ಗೆ 6 ಗಂಟೆಯಿಂದ ನ.3 ರ ರಾತ್ರಿವರೆಗೆ ಒಟ್ಟು ನಾಲ್ಕು ದಿನ ದಾಳಿ ಮಾಡಿ ಚಿನ್ನಾಭರಣ ಹಾಗೂ ದಾಖಲೆ ಪರಿಶೀಲನೆ ನಡೆಸಿದ್ದರು. ನಾಲ್ಕು ದಿನಗಳಿಂದ ಐಟಿ ದಾಳಿಯಿಂದ ಆಭರಣ ಜ್ಯುವೆಲರಿ ಶಾಪ್ ಬಂದ್ ಮಾಡಿ ಗ್ರಾಹಕರಿಗೆ ಪ್ರವೇಶ ನಿಷೇಧ ಮಾಡಲಾಗಿತ್ತು.

ಉಡುಪಿಯ ಆಭರಣ ಶಾಪ್ ಗಳಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮವಾಗಿ ಶೇಖರಿಸಿಟ್ಟ ಚಿನ್ನದ ಗಟ್ಟಿಯನ್ನು ಐಟಿ ಅಧಿಕಾರಿಗಳಿಗೆ ಪತ್ತೆಯಾಗಿದ್ದು. ಅಲ್ಲಿಯ ದಾಳಿ ಐದನೇ ದಿನಕ್ಕೆ ಮುಂದುವರಿದಿದೆ ಎಂದು ಐಟಿ ಮೂಲಗಳು ತಿಳಿಸಿದ್ದಾರೆ.

Related posts

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬ್ರಹ್ಮಾವರ ವಲಯ ಹಾಗೂ ರೋಟರಿ ಕ್ಲಬ್ ವತಿಯಿಂದ ಪ್ರತಿಷ್ಠಿತ ಛಾಯಾರತ್ನ ಪ್ರಶಸ್ತಿಗೆ ಉಮೇಶ್ ಮದ್ದಡ್ಕ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya
error: Content is protected !!