March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ( ಕೃಷಿ ಇಲಾಖೆ) ಯಲ್ಲಿ ಅ.31ರಂದು
“ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಮತ್ತು ಕರ್ನಾಟಕ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಲಿಮಿಟೆಡ್ (KREDL) ಸಹಯೋಗದಲ್ಲಿ “ಸ್ಟಾರ್ ಲೇಬಲ್ ಹೊಂದಿರುವ ಮತ್ತು ವಿದ್ಯುತ್ ದಕ್ಷತೆಯುಳ್ಳ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಸುಮಾರು 98 ಜನ ರೈತರು ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದು,, ಪುರುಷ ಮತ್ತು ಮಹಿಳಾ ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳು ದೀಪ ಬೆಳಗಿಸುವ ಮೂಲಕ ತರಬೇತಿ ಪ್ರಾರಂಭಗೊಂಡಿತು. ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಶೈಲಜ ಎ.ಎನ್ ರವರು, ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿದರು.

ಶಿವಮೊಗ್ಗದಿಂದ ( JNNCE | ಡಾ|| ಅಜ್ಜಣ್ಣ, ಉಡುಪಿಯಿಂದ ಡಾ|| ನಾರಾಯಣ ಶೆಣೈ ( MIT) ಹಾಗೂ SDMEC, ಉಜಿರೆಯಿಂದ ಡಾ|| ಸತ್ಯನಾರಾಯಣ, ಡಾ|| ಸುಬ್ರಹ್ಮಣ್ಯ, ಡ| ಕೃಷ್ಣಪ್ರಸಾದ್‌ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರೈತರಿಗೆ ಬಹಳಷ್ಟು ಉಪಯುಕ್ತ ಮಾಹಿತಿ ನೀಡಿದರು. ಅಲ್ಲದೆ ಉಜಿರೆಯ ಶಿವಪ್ರಸಾದ್ ರವರು ಪಂಪ್ ಸೆಟ್ ದುರಸ್ಥಿ ಬಗ್ಗೆ ಪ್ರಾತ್ಯಕ್ಷತೆ ನೀಡಿದರು.

ತರಬೇತಿಯ ಅಂತ್ಯದಲ್ಲಿ ಕೃಷಿ ಅಧಿಕಾರಿ (ಪ್ರಭಾರ) ಆದ ಗಣೇಶ್ ರವರು ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ಸರಣಿ ಅಪಘಾತ: ಎರಡು ಬಸ್ಸು ಸೇರಿದಂತೆ 7 ವಾಹನಗಳಿಗೆ ಡಿಕ್ಕಿ ಹೊಡೆದ ಲಾರಿ: ಯುವತಿ ಗಂಭೀರ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಹೊಕ್ಕಾಡಿಗೋಳಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya
error: Content is protected !!