July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ( ಕೃಷಿ ಇಲಾಖೆ) ಯಲ್ಲಿ ಅ.31ರಂದು
“ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಮತ್ತು ಕರ್ನಾಟಕ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಲಿಮಿಟೆಡ್ (KREDL) ಸಹಯೋಗದಲ್ಲಿ “ಸ್ಟಾರ್ ಲೇಬಲ್ ಹೊಂದಿರುವ ಮತ್ತು ವಿದ್ಯುತ್ ದಕ್ಷತೆಯುಳ್ಳ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಸುಮಾರು 98 ಜನ ರೈತರು ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದು,, ಪುರುಷ ಮತ್ತು ಮಹಿಳಾ ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳು ದೀಪ ಬೆಳಗಿಸುವ ಮೂಲಕ ತರಬೇತಿ ಪ್ರಾರಂಭಗೊಂಡಿತು. ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಶೈಲಜ ಎ.ಎನ್ ರವರು, ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿದರು.

ಶಿವಮೊಗ್ಗದಿಂದ ( JNNCE | ಡಾ|| ಅಜ್ಜಣ್ಣ, ಉಡುಪಿಯಿಂದ ಡಾ|| ನಾರಾಯಣ ಶೆಣೈ ( MIT) ಹಾಗೂ SDMEC, ಉಜಿರೆಯಿಂದ ಡಾ|| ಸತ್ಯನಾರಾಯಣ, ಡಾ|| ಸುಬ್ರಹ್ಮಣ್ಯ, ಡ| ಕೃಷ್ಣಪ್ರಸಾದ್‌ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರೈತರಿಗೆ ಬಹಳಷ್ಟು ಉಪಯುಕ್ತ ಮಾಹಿತಿ ನೀಡಿದರು. ಅಲ್ಲದೆ ಉಜಿರೆಯ ಶಿವಪ್ರಸಾದ್ ರವರು ಪಂಪ್ ಸೆಟ್ ದುರಸ್ಥಿ ಬಗ್ಗೆ ಪ್ರಾತ್ಯಕ್ಷತೆ ನೀಡಿದರು.

ತರಬೇತಿಯ ಅಂತ್ಯದಲ್ಲಿ ಕೃಷಿ ಅಧಿಕಾರಿ (ಪ್ರಭಾರ) ಆದ ಗಣೇಶ್ ರವರು ವಂದಿಸಿದರು.

Related posts

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ವೇಣೂರು: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಕಾಂಗ್ರೇಸ್ ವಿರುದ್ದ ಪ್ರತಿಭಟನೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya
error: Content is protected !!