September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ( ಕೃಷಿ ಇಲಾಖೆ) ಯಲ್ಲಿ ಅ.31ರಂದು
“ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಮತ್ತು ಕರ್ನಾಟಕ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಲಿಮಿಟೆಡ್ (KREDL) ಸಹಯೋಗದಲ್ಲಿ “ಸ್ಟಾರ್ ಲೇಬಲ್ ಹೊಂದಿರುವ ಮತ್ತು ವಿದ್ಯುತ್ ದಕ್ಷತೆಯುಳ್ಳ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಸುಮಾರು 98 ಜನ ರೈತರು ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದು,, ಪುರುಷ ಮತ್ತು ಮಹಿಳಾ ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳು ದೀಪ ಬೆಳಗಿಸುವ ಮೂಲಕ ತರಬೇತಿ ಪ್ರಾರಂಭಗೊಂಡಿತು. ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಶೈಲಜ ಎ.ಎನ್ ರವರು, ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿದರು.

ಶಿವಮೊಗ್ಗದಿಂದ ( JNNCE | ಡಾ|| ಅಜ್ಜಣ್ಣ, ಉಡುಪಿಯಿಂದ ಡಾ|| ನಾರಾಯಣ ಶೆಣೈ ( MIT) ಹಾಗೂ SDMEC, ಉಜಿರೆಯಿಂದ ಡಾ|| ಸತ್ಯನಾರಾಯಣ, ಡಾ|| ಸುಬ್ರಹ್ಮಣ್ಯ, ಡ| ಕೃಷ್ಣಪ್ರಸಾದ್‌ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರೈತರಿಗೆ ಬಹಳಷ್ಟು ಉಪಯುಕ್ತ ಮಾಹಿತಿ ನೀಡಿದರು. ಅಲ್ಲದೆ ಉಜಿರೆಯ ಶಿವಪ್ರಸಾದ್ ರವರು ಪಂಪ್ ಸೆಟ್ ದುರಸ್ಥಿ ಬಗ್ಗೆ ಪ್ರಾತ್ಯಕ್ಷತೆ ನೀಡಿದರು.

ತರಬೇತಿಯ ಅಂತ್ಯದಲ್ಲಿ ಕೃಷಿ ಅಧಿಕಾರಿ (ಪ್ರಭಾರ) ಆದ ಗಣೇಶ್ ರವರು ವಂದಿಸಿದರು.

Related posts

ಕಣಿಯೂರು: ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ರಜತ ಮಹೋತ್ಸವ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya
error: Content is protected !!