25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 4ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾ ಭವನದಲ್ಲಿ ಜರುಗಿತು. ‌‌ಅಧ್ಯಕ್ಷತೆಯನ್ನು ದೇವರಾಜು ಎಚ್.ಎಂ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ, ಬೆಳ್ತಂಗಡಿ ವಹಿಸಿದ್ದರು.

ಉದ್ಘಾಟನೆಯನ್ನು ಮಹೇಶ್ ಕಜೆ ವಕೀಲರು, ಇಡಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಂದೇಶ್ ಕೆ. ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ, ಬೆಳ್ತಂಗಡಿ, ವಿಜಯೇಂದ್ರ ಟಿ.ಹೆಚ್ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಬೆಳ್ತಂಗಡಿ , ಶ್ರೀಹರಿ ಮುಗೇರಾಯ ನ್ಯಾಯವಾದಿ, ಕಾರ್ಕಳ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಕೆ. ಪೃಥ್ವಿರಾಜ್ ರೈ ಅಧ್ಯಕ್ಷರು, ವಕೀಲರ ಸಂಘ ಮಂಗಳೂರು, ಎಂ.ಕೆ. ದೇವೇಂದ್ರ ಕುಮಾರ್ ಅಧ್ಯಕ್ಷರು, ವಕೀಲರ ಸಂಘ ಮೂಡುಬಿದಿರೆ, ಕೃಷ್ಣಪ್ಪ ಉಪಾಧ್ಯಕ್ಷರು, ವಕೀಲರ ಸಂಘ ಪುತ್ತೂರು, ನಾರಾಯಣ ಕೆ.ಅಧ್ಯಕ್ಷರು, ವಕೀಲರ ಸಂಘ ಸುಳ್ಯ ರಾಜೇಶ್ ಬೊಳ್ಳುಕಲ್ಲು ಉಪಾಧ್ಯಕ್ಷರು, ಬಂಟ್ವಾಳ ವಕೀಲರ ಸಂಘ ಭಾಗವಹಿಸಿದ್ದರು. ನೂತನ ಅಧ್ಯಕ್ಷ ವಸಂತ ಮರಕಡ, ನವೀನ್ ಬಿ.ಕೆ. ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ ‌ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿ ವಿನಯ್ ಕುಮಾರ್, ಕೋಶಾಧಿಕಾರಿ ಪ್ರಶಾಂತ್ ಎಂ.ಅಲೋಶಿಯಸ್ ಎಸ್. ಲೋಬೋ ಅಧ್ಯಕ್ಷರು ಹಿರಿಯ ವಕೀಲರ ಸಮಿತಿ, ಸ್ವರ್ಣಲತಾ ಕಾಯದಶಿ೯, ಸದಸ್ಯ ಶಶಿಕಿರಣ್ ಜೈನ್ ಪದಗ್ರಹಣ ಸ್ವೀಕರಿಸಿದರು. ಶೈಲೇಶ್ ಆರ್.ಠೋಸರ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿದರು. ಧನಂಜಯ ರಾವ್ ಕಾಯ೯ಕ್ರಮ ನಿರೂಪಿಸಿದರು. ನೂತನ ಕಾಯ೯ದಶಿ೯ ನವೀನ್ ಬಿ.ಕೆ ಧನ್ಯವಾದವಿತ್ತರು.ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಕೀಲರ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ : KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್ : ಬೆಂಕಿ ಕೆನ್ನಾ ‌ಲಿಗೆ ಸುಟ್ಟು ಭಸ್ಮವಾದ ವಸ್ತುಗಳು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!