September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

ಮುಂಡಾಜೆ : ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಜಾಗೃತ ಜಾಗೃತಿ ಸಪ್ತಾಹ’ವನ್ನು ಅ.30 ನ.5 ರವರೆಗೆ “ಭ್ರಷ್ಟಾಚಾರಕ್ಕೆ ಬೇಡವೆನ್ನಿ; ರಾಷ್ಟ್ರಕ್ಕೆ ಬದ್ಧರಾಗಿರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಂತ ಆಚರಿಸಲಾಗುತ್ತಿದೆ.


ಈ ನಿಟ್ಟಿನಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿ ‘ಕಾಲೇಜು ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಅರಿವು ಮೂಡಿಸುವುದು, ಮಕ್ಕಳು ದೇಶದ ಭವಿಷ್ಯದ ಆಸ್ತಿಗಳು ಮತ್ತು ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಮುಖ್ಯ’ ಎಂದರು. ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ರೇಂಜರ್ ಲೀಡರ್ ಶ್ರೀಮತಿ ವಸಂತಿ ಪ್ರತಿಜ್ಞಾ ವಿಧಿ ಬೋಧಿಸಿದರು, ವಿದ್ಯಾರ್ಥಿನಿಯರಾದ ಕುಮಾರಿ ವಿಂಧ್ಯಾ ಸ್ವಾಗತಿಸಿ, ಕುಮಾರಿ ಅಂಜಲಿ ವಂದಿಸಿದರು.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಶಿಬಾಜೆ ಶಾಲಾ ಮಕ್ಕಳಿಗೆ ಓಣಂ ಪ್ರಯುಕ್ತ ಓಣಂ ಭೋಜನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya
error: Content is protected !!