April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

‘ ಸಾಹಿತ್ಯ, ಸಂಸ್ಕೃತಿ, ವ್ಯಾಪಾರ ವ್ಯವಹಾರ ಎಲ್ಲದರಲ್ಲೂ ಕನ್ನಡಿಗರು ಜಗತ್ತಿನಲ್ಲೇ ಅನನ್ಯ ಸಾಧನೆ ಮಾಡಿದ್ದಾರೆ ‘ ಎಂದು ವಿಶ್ರಾಂತ ಮುಖ್ಯೋಪಾಧ್ಯಾಯ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್ ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ ಕನ್ನಡಿಗರ ಶೌರ್ಯ, ಸಾಹಸ ಮೆಚ್ಚಿಕೊಳ್ಳುವಂತೆ, ಔದಾರ್ಯ, ಸಜ್ಜನಿಕೆಗಳನ್ನು ಕೂಡಾ ನಾವು ಕೊಂಡಾಡ ಬೇಕಿದೆ ‘ ಎಂದವರು ಹೇಳಿದರು.

ವಿದ್ಯಾರ್ಥಿನಿಯರು ನಾಡು – ನುಡಿ ಹಿರಿಮೆ ಬಣ್ಣಿಸುವ ಹಾಡುಗಳನ್ನು ಹಾಡಿದರು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಜಯರಾಂ ಸ್ವಾಗತಿಸಿ, ಉಪನ್ಯಾಸಕಿ ದಿಶಾ ಸಿ ಜೆ ವಂದಿಸಿದರು. ಉಪನ್ಯಾಸಕ ರಂಜಿತ್ ನಿರೂಪಿಸಿದರು.

Related posts

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya
error: Content is protected !!