25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

‘ ಸಾಹಿತ್ಯ, ಸಂಸ್ಕೃತಿ, ವ್ಯಾಪಾರ ವ್ಯವಹಾರ ಎಲ್ಲದರಲ್ಲೂ ಕನ್ನಡಿಗರು ಜಗತ್ತಿನಲ್ಲೇ ಅನನ್ಯ ಸಾಧನೆ ಮಾಡಿದ್ದಾರೆ ‘ ಎಂದು ವಿಶ್ರಾಂತ ಮುಖ್ಯೋಪಾಧ್ಯಾಯ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್ ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ ಕನ್ನಡಿಗರ ಶೌರ್ಯ, ಸಾಹಸ ಮೆಚ್ಚಿಕೊಳ್ಳುವಂತೆ, ಔದಾರ್ಯ, ಸಜ್ಜನಿಕೆಗಳನ್ನು ಕೂಡಾ ನಾವು ಕೊಂಡಾಡ ಬೇಕಿದೆ ‘ ಎಂದವರು ಹೇಳಿದರು.

ವಿದ್ಯಾರ್ಥಿನಿಯರು ನಾಡು – ನುಡಿ ಹಿರಿಮೆ ಬಣ್ಣಿಸುವ ಹಾಡುಗಳನ್ನು ಹಾಡಿದರು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಜಯರಾಂ ಸ್ವಾಗತಿಸಿ, ಉಪನ್ಯಾಸಕಿ ದಿಶಾ ಸಿ ಜೆ ವಂದಿಸಿದರು. ಉಪನ್ಯಾಸಕ ರಂಜಿತ್ ನಿರೂಪಿಸಿದರು.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ವಿಶ್ವಹಿಂದೂ ಪರಿಷತ್ ಭಜರಂಗದಳ ವೇಣೂರು ಪ್ರಖಂಡದಿಂದ ವೇಣೂರು ಪೋಲೀಸ್ ಠಾಣೆಗೆ ದೂರು

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya
error: Content is protected !!