38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

‘ ಸಾಹಿತ್ಯ, ಸಂಸ್ಕೃತಿ, ವ್ಯಾಪಾರ ವ್ಯವಹಾರ ಎಲ್ಲದರಲ್ಲೂ ಕನ್ನಡಿಗರು ಜಗತ್ತಿನಲ್ಲೇ ಅನನ್ಯ ಸಾಧನೆ ಮಾಡಿದ್ದಾರೆ ‘ ಎಂದು ವಿಶ್ರಾಂತ ಮುಖ್ಯೋಪಾಧ್ಯಾಯ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್ ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ ಕನ್ನಡಿಗರ ಶೌರ್ಯ, ಸಾಹಸ ಮೆಚ್ಚಿಕೊಳ್ಳುವಂತೆ, ಔದಾರ್ಯ, ಸಜ್ಜನಿಕೆಗಳನ್ನು ಕೂಡಾ ನಾವು ಕೊಂಡಾಡ ಬೇಕಿದೆ ‘ ಎಂದವರು ಹೇಳಿದರು.

ವಿದ್ಯಾರ್ಥಿನಿಯರು ನಾಡು – ನುಡಿ ಹಿರಿಮೆ ಬಣ್ಣಿಸುವ ಹಾಡುಗಳನ್ನು ಹಾಡಿದರು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಜಯರಾಂ ಸ್ವಾಗತಿಸಿ, ಉಪನ್ಯಾಸಕಿ ದಿಶಾ ಸಿ ಜೆ ವಂದಿಸಿದರು. ಉಪನ್ಯಾಸಕ ರಂಜಿತ್ ನಿರೂಪಿಸಿದರು.

Related posts

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya
error: Content is protected !!