25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

‘ ಸಾಹಿತ್ಯ, ಸಂಸ್ಕೃತಿ, ವ್ಯಾಪಾರ ವ್ಯವಹಾರ ಎಲ್ಲದರಲ್ಲೂ ಕನ್ನಡಿಗರು ಜಗತ್ತಿನಲ್ಲೇ ಅನನ್ಯ ಸಾಧನೆ ಮಾಡಿದ್ದಾರೆ ‘ ಎಂದು ವಿಶ್ರಾಂತ ಮುಖ್ಯೋಪಾಧ್ಯಾಯ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್ ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ ಕನ್ನಡಿಗರ ಶೌರ್ಯ, ಸಾಹಸ ಮೆಚ್ಚಿಕೊಳ್ಳುವಂತೆ, ಔದಾರ್ಯ, ಸಜ್ಜನಿಕೆಗಳನ್ನು ಕೂಡಾ ನಾವು ಕೊಂಡಾಡ ಬೇಕಿದೆ ‘ ಎಂದವರು ಹೇಳಿದರು.

ವಿದ್ಯಾರ್ಥಿನಿಯರು ನಾಡು – ನುಡಿ ಹಿರಿಮೆ ಬಣ್ಣಿಸುವ ಹಾಡುಗಳನ್ನು ಹಾಡಿದರು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಜಯರಾಂ ಸ್ವಾಗತಿಸಿ, ಉಪನ್ಯಾಸಕಿ ದಿಶಾ ಸಿ ಜೆ ವಂದಿಸಿದರು. ಉಪನ್ಯಾಸಕ ರಂಜಿತ್ ನಿರೂಪಿಸಿದರು.

Related posts

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಎಕ್ಸೆಲ್ ಉಪನ್ಯಾಸಕರಿಂದ ಸಾಂಸ್ಕೃತಿಕ ವೈಭವ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!