22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

‘ ಸಾಹಿತ್ಯ, ಸಂಸ್ಕೃತಿ, ವ್ಯಾಪಾರ ವ್ಯವಹಾರ ಎಲ್ಲದರಲ್ಲೂ ಕನ್ನಡಿಗರು ಜಗತ್ತಿನಲ್ಲೇ ಅನನ್ಯ ಸಾಧನೆ ಮಾಡಿದ್ದಾರೆ ‘ ಎಂದು ವಿಶ್ರಾಂತ ಮುಖ್ಯೋಪಾಧ್ಯಾಯ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಕ್ಯಾಂಪಸ್ ಮನೇಜರ್ ಶಾಂತಿರಾಜ್ ಜೈನ್ ಹೇಳಿದರು. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ‘ ಕನ್ನಡಿಗರ ಶೌರ್ಯ, ಸಾಹಸ ಮೆಚ್ಚಿಕೊಳ್ಳುವಂತೆ, ಔದಾರ್ಯ, ಸಜ್ಜನಿಕೆಗಳನ್ನು ಕೂಡಾ ನಾವು ಕೊಂಡಾಡ ಬೇಕಿದೆ ‘ ಎಂದವರು ಹೇಳಿದರು.

ವಿದ್ಯಾರ್ಥಿನಿಯರು ನಾಡು – ನುಡಿ ಹಿರಿಮೆ ಬಣ್ಣಿಸುವ ಹಾಡುಗಳನ್ನು ಹಾಡಿದರು.

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಎಕ್ಸೆಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಜಯರಾಂ ಸ್ವಾಗತಿಸಿ, ಉಪನ್ಯಾಸಕಿ ದಿಶಾ ಸಿ ಜೆ ವಂದಿಸಿದರು. ಉಪನ್ಯಾಸಕ ರಂಜಿತ್ ನಿರೂಪಿಸಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಆಶ್ರಯದಲ್ಲಿ ನಾಳೆ(ಡಿ.29) ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಸಂಕೀರ್ಣ ಕಟ್ಟಡ ಉದ್ಘಾಟನೆ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷಗಳ ಕಾಲ ಜಿಲ್ಲೆಯಿಂದ ಗಡಿಪಾರು

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya
error: Content is protected !!