30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

ಬೆಳ್ತಂಗಡಿ : ಕರ್ನಾಟಕದಲ್ಲಿರುವ ಎಲ್ಲಾ ಆಭರಣ ಜ್ಯುವೆಲರಿ ಮಳಿಗೆ ಸಂಸ್ಥೆ ಮೇಲೆ ಅ.31 ರಿಂದ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದರು. ಬೆಳ್ತಂಗಡಿಯ ಆಭರಣ ಜ್ಯುವೆಲರಿ ಶಾಪ್ ನಲ್ಲಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ನ.4 ಬೆಳಗ್ಗಿನ ಜಾವ 2:30 ಕ್ಕೆ ಬೆಂಗಳೂರು ಐಟಿ ಕಚೇರಿಗೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಭರಣಿ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಎರಡು ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶ, ತಮಿಳುನಾಡು, ಕೊಚ್ಚಿ ಸೇರಿದಂತೆ ಒಂಭತ್ತು ಜನ ಅಧಿಕಾರಿಗಳು ಅ.31 ರಂದು ಬೆಳಗ್ಗೆ 6 ಗಂಟೆಯಿಂದ ನ.3 ರ ರಾತ್ರಿವರೆಗೆ ಒಟ್ಟು ನಾಲ್ಕು ದಿನ ದಾಳಿ ಮಾಡಿ ಚಿನ್ನಾಭರಣ ಹಾಗೂ ದಾಖಲೆ ಪರಿಶೀಲನೆ ನಡೆಸಿದ್ದರು. ನಾಲ್ಕು ದಿನಗಳಿಂದ ಐಟಿ ದಾಳಿಯಿಂದ ಆಭರಣ ಜ್ಯುವೆಲರಿ ಶಾಪ್ ಬಂದ್ ಮಾಡಿ ಗ್ರಾಹಕರಿಗೆ ಪ್ರವೇಶ ನಿಷೇಧ ಮಾಡಲಾಗಿತ್ತು.

ಉಡುಪಿಯ ಆಭರಣ ಶಾಪ್ ಗಳಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮವಾಗಿ ಶೇಖರಿಸಿಟ್ಟ ಚಿನ್ನದ ಗಟ್ಟಿಯನ್ನು ಐಟಿ ಅಧಿಕಾರಿಗಳಿಗೆ ಪತ್ತೆಯಾಗಿದ್ದು. ಅಲ್ಲಿಯ ದಾಳಿ ಐದನೇ ದಿನಕ್ಕೆ ಮುಂದುವರಿದಿದೆ ಎಂದು ಐಟಿ ಮೂಲಗಳು ತಿಳಿಸಿದ್ದಾರೆ.

Related posts

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲದಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 19 ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya
error: Content is protected !!