25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ: ವಕೀಲರ ಸಂಘ ಬೆಳ್ತಂಗಡಿ ಇದರ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನ. 4ರಂದು ಬೆಳ್ತಂಗಡಿ ಎಸ್.ಡಿ.ಎಂ ಕಲಾ ಭವನದಲ್ಲಿ ಜರುಗಿತು. ‌‌ಅಧ್ಯಕ್ಷತೆಯನ್ನು ದೇವರಾಜು ಎಚ್.ಎಂ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ, ಬೆಳ್ತಂಗಡಿ ವಹಿಸಿದ್ದರು.

ಉದ್ಘಾಟನೆಯನ್ನು ಮಹೇಶ್ ಕಜೆ ವಕೀಲರು, ಇಡಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಂದೇಶ್ ಕೆ. ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ, ಬೆಳ್ತಂಗಡಿ, ವಿಜಯೇಂದ್ರ ಟಿ.ಹೆಚ್ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ಬೆಳ್ತಂಗಡಿ , ಶ್ರೀಹರಿ ಮುಗೇರಾಯ ನ್ಯಾಯವಾದಿ, ಕಾರ್ಕಳ ಭಾಗವಹಿಸಿದ್ದರು. ಗೌರವ ಅತಿಥಿಗಳಾಗಿ ಕೆ. ಪೃಥ್ವಿರಾಜ್ ರೈ ಅಧ್ಯಕ್ಷರು, ವಕೀಲರ ಸಂಘ ಮಂಗಳೂರು, ಎಂ.ಕೆ. ದೇವೇಂದ್ರ ಕುಮಾರ್ ಅಧ್ಯಕ್ಷರು, ವಕೀಲರ ಸಂಘ ಮೂಡುಬಿದಿರೆ, ಕೃಷ್ಣಪ್ಪ ಉಪಾಧ್ಯಕ್ಷರು, ವಕೀಲರ ಸಂಘ ಪುತ್ತೂರು, ನಾರಾಯಣ ಕೆ.ಅಧ್ಯಕ್ಷರು, ವಕೀಲರ ಸಂಘ ಸುಳ್ಯ ರಾಜೇಶ್ ಬೊಳ್ಳುಕಲ್ಲು ಉಪಾಧ್ಯಕ್ಷರು, ಬಂಟ್ವಾಳ ವಕೀಲರ ಸಂಘ ಭಾಗವಹಿಸಿದ್ದರು. ನೂತನ ಅಧ್ಯಕ್ಷ ವಸಂತ ಮರಕಡ, ನವೀನ್ ಬಿ.ಕೆ. ಪ್ರಧಾನ ಕಾರ್ಯದರ್ಶಿ, ಉಪಾಧ್ಯಕ್ಷ ‌ಅಶೋಕ್ ಕರಿಯನೆಲ, ಜೊತೆ ಕಾರ್ಯದರ್ಶಿ ವಿನಯ್ ಕುಮಾರ್, ಕೋಶಾಧಿಕಾರಿ ಪ್ರಶಾಂತ್ ಎಂ.ಅಲೋಶಿಯಸ್ ಎಸ್. ಲೋಬೋ ಅಧ್ಯಕ್ಷರು ಹಿರಿಯ ವಕೀಲರ ಸಮಿತಿ, ಸ್ವರ್ಣಲತಾ ಕಾಯದಶಿ೯, ಸದಸ್ಯ ಶಶಿಕಿರಣ್ ಜೈನ್ ಪದಗ್ರಹಣ ಸ್ವೀಕರಿಸಿದರು. ಶೈಲೇಶ್ ಆರ್.ಠೋಸರ್ ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿದರು. ಧನಂಜಯ ರಾವ್ ಕಾಯ೯ಕ್ರಮ ನಿರೂಪಿಸಿದರು. ನೂತನ ಕಾಯ೯ದಶಿ೯ ನವೀನ್ ಬಿ.ಕೆ ಧನ್ಯವಾದವಿತ್ತರು.ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಕೀಲರ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

Related posts

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya
error: Content is protected !!