23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

ಮುಂಡಾಜೆ : ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಜಾಗೃತ ಜಾಗೃತಿ ಸಪ್ತಾಹ’ವನ್ನು ಅ.30 ನ.5 ರವರೆಗೆ “ಭ್ರಷ್ಟಾಚಾರಕ್ಕೆ ಬೇಡವೆನ್ನಿ; ರಾಷ್ಟ್ರಕ್ಕೆ ಬದ್ಧರಾಗಿರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಂತ ಆಚರಿಸಲಾಗುತ್ತಿದೆ.


ಈ ನಿಟ್ಟಿನಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿ ‘ಕಾಲೇಜು ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಅರಿವು ಮೂಡಿಸುವುದು, ಮಕ್ಕಳು ದೇಶದ ಭವಿಷ್ಯದ ಆಸ್ತಿಗಳು ಮತ್ತು ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಮುಖ್ಯ’ ಎಂದರು. ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ರೇಂಜರ್ ಲೀಡರ್ ಶ್ರೀಮತಿ ವಸಂತಿ ಪ್ರತಿಜ್ಞಾ ವಿಧಿ ಬೋಧಿಸಿದರು, ವಿದ್ಯಾರ್ಥಿನಿಯರಾದ ಕುಮಾರಿ ವಿಂಧ್ಯಾ ಸ್ವಾಗತಿಸಿ, ಕುಮಾರಿ ಅಂಜಲಿ ವಂದಿಸಿದರು.

Related posts

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!