April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

ಧರ್ಮಸ್ಥಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಯ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣಾ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ನ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು.

ಡೆಸ್ಕ್ ಬೆಂಚು ವಿತರಣೆ ಕಾರ್ಯಕ್ರಮವನ್ನು ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರು ಹಸಿರು ನಿಶಾನೆ ತೋರಿಸುವ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್. ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತರಾಮ್ ಆರ್.ಪೈ., ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಚಿನ್ಮಯಿ ಇಂಡಸ್ಟ್ರೀಸ್ ಮಾಲಕ ಸುಂದರ ಗೌಡ ಇಚ್ಚಿಲ, ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್, ಸಮುದಾಯ ಅಭಿವೃದ್ಧಿ ವಿಭಾಗದ ಯೋಜನಾಧಿಕಾರಿ ಮತ್ತು ಸಮುದಾಯ ಅಭಿವೃದ್ಧಿ ವಿಭಾಗದ ಪ್ರಬಂಧಕರು ಹಾಗೂ ಮೇಲ್ವಿಚಾರಕ ಶೇಖರ್ ವೈ, ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು.ಸುಧೀರ್ ಕಾಯ೯ಕ್ರಮ ನಿರೂಪಿಸಿದರು.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya
error: Content is protected !!