29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

ಧರ್ಮಸ್ಥಳ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಯ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣಾ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ನ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ನಡೆಯಿತು.

ಡೆಸ್ಕ್ ಬೆಂಚು ವಿತರಣೆ ಕಾರ್ಯಕ್ರಮವನ್ನು ಡಾ|| ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ|| ಹೇಮಾವತಿ ವೀ. ಹೆಗ್ಗಡೆಯವರು ಹಸಿರು ನಿಶಾನೆ ತೋರಿಸುವ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್. ಮಂಜುನಾಥ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತರಾಮ್ ಆರ್.ಪೈ., ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್, ಚಿನ್ಮಯಿ ಇಂಡಸ್ಟ್ರೀಸ್ ಮಾಲಕ ಸುಂದರ ಗೌಡ ಇಚ್ಚಿಲ, ಸಮುದಾಯ ಅಭಿವೃದ್ಧಿ ವಿಭಾಗದ ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್, ಸಮುದಾಯ ಅಭಿವೃದ್ಧಿ ವಿಭಾಗದ ಯೋಜನಾಧಿಕಾರಿ ಮತ್ತು ಸಮುದಾಯ ಅಭಿವೃದ್ಧಿ ವಿಭಾಗದ ಪ್ರಬಂಧಕರು ಹಾಗೂ ಮೇಲ್ವಿಚಾರಕ ಶೇಖರ್ ವೈ, ಎಸ್‌ಡಿಎಂ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು.ಸುಧೀರ್ ಕಾಯ೯ಕ್ರಮ ನಿರೂಪಿಸಿದರು.

Related posts

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya
error: Content is protected !!