September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

                                   

ಉಜಿರೆ: ಕೆಲಸದಲ್ಲಿ ಉತ್ತಮ ಗುಣಮಟ್ಟ ಇರಬೇಕು ಮತ್ತು ಬದ್ಧತೆಯಿಂದ ಕೆಲಸ ಮಾಡಬೇಕು ಸಮಯಕ್ಕೆ ಆದ್ಯತೆ ನೀಡಿ ನಗು ಮುಖದ ಸೇವೆಯನ್ನು ನೀಡಲು ಕಲಿಯಬೇಕು. ಬಾಹ್ಯ ಸೌಂದರ್ಯಕ್ಕಿಂತ ಆಂತರಿಕ ಸೌಂದರ್ಯ ಹೆಚ್ಚು ಮಹತ್ವ ಇರುತ್ತದೆ ಎಂದು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು ಆರ್ಶೀವಚನ ನೀಡುತ್ತಾ ತಿಳಿಸಿದರು.

ಅವರು ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಜ್ಙಾನ ವಿಕಾಸ ಮಹಿಳಾ ಆಯ್ದ ಕಾರ್ಯಕರ್ತರಿಗೆ 6 ದಿನಗಳ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯಲ್ಲಿ ಮದು ಮಗಳ ಶೃಂಗಾರ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಶಿಭಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಮಾರ್ಗದರ್ಶನ ನೀಡುತ್ತಾ ಶೃಂಗಾರ ಮಾಡಿಸಿಕೊಳ್ಳುವವರು ಕೂಡ ಸರಿಯಾದ ವಿಶ್ರಾಂತಿ ಮತ್ತು ಹೆಚ್ಚು ನೀರನ್ನು ಕುಡಿದಿರಬೇಕು ಎಂದು ಸಲಹೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಶಿಭಿರಾರ್ಥಿಗಳು ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರು ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಆರ್ಶೀವಾದ ಪಡೆದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯ ನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರ್, ನಿರ್ದೇಶಕರಾದ ಎಮ್. ಸುರೇಶ್‌ರವರು ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಮತ್ತು ಕಛೇರಿ ಸಹಾಯಕರಾದ ಪ್ರವೀಣ್ ರವರು ಉಪಸ್ಥಿತರಿದ್ದರು. ಕೆಲವು ಶಿಭಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ತರಬೇತಿಯಲ್ಲಿ 31 ಮಹಿಳಾ ಅಭ್ಯರ್ಥಿಗಳು ಭಾಗವಹಿಸಿದ್ದರು.

Related posts

ಉರುವಾಲು ಪದವು ಶ್ರೀ ಮಹಮ್ಮಾಯಿ ದೇವಿಯ ವಾರ್ಷಿಕ ಗೊಂದೋಳು ಪೂಜೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಉಜಿರೆ ದುರ್ಗಾ ಮೊಬೈಲ್‌ಗೆ ಧರ್ಮದರ್ಶಿ ಹರೀಶ್ ಆರಿಕೋಡಿ ಭೇಟಿ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya
error: Content is protected !!