23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

ಬೆಳ್ತಂಗಡಿ : ಕರ್ನಾಟಕದಲ್ಲಿರುವ ಎಲ್ಲಾ ಆಭರಣ ಜ್ಯುವೆಲರಿ ಮಳಿಗೆ ಸಂಸ್ಥೆ ಮೇಲೆ ಅ.31 ರಿಂದ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದರು. ಬೆಳ್ತಂಗಡಿಯ ಆಭರಣ ಜ್ಯುವೆಲರಿ ಶಾಪ್ ನಲ್ಲಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ನ.4 ಬೆಳಗ್ಗಿನ ಜಾವ 2:30 ಕ್ಕೆ ಬೆಂಗಳೂರು ಐಟಿ ಕಚೇರಿಗೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಭರಣಿ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಎರಡು ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶ, ತಮಿಳುನಾಡು, ಕೊಚ್ಚಿ ಸೇರಿದಂತೆ ಒಂಭತ್ತು ಜನ ಅಧಿಕಾರಿಗಳು ಅ.31 ರಂದು ಬೆಳಗ್ಗೆ 6 ಗಂಟೆಯಿಂದ ನ.3 ರ ರಾತ್ರಿವರೆಗೆ ಒಟ್ಟು ನಾಲ್ಕು ದಿನ ದಾಳಿ ಮಾಡಿ ಚಿನ್ನಾಭರಣ ಹಾಗೂ ದಾಖಲೆ ಪರಿಶೀಲನೆ ನಡೆಸಿದ್ದರು. ನಾಲ್ಕು ದಿನಗಳಿಂದ ಐಟಿ ದಾಳಿಯಿಂದ ಆಭರಣ ಜ್ಯುವೆಲರಿ ಶಾಪ್ ಬಂದ್ ಮಾಡಿ ಗ್ರಾಹಕರಿಗೆ ಪ್ರವೇಶ ನಿಷೇಧ ಮಾಡಲಾಗಿತ್ತು.

ಉಡುಪಿಯ ಆಭರಣ ಶಾಪ್ ಗಳಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮವಾಗಿ ಶೇಖರಿಸಿಟ್ಟ ಚಿನ್ನದ ಗಟ್ಟಿಯನ್ನು ಐಟಿ ಅಧಿಕಾರಿಗಳಿಗೆ ಪತ್ತೆಯಾಗಿದ್ದು. ಅಲ್ಲಿಯ ದಾಳಿ ಐದನೇ ದಿನಕ್ಕೆ ಮುಂದುವರಿದಿದೆ ಎಂದು ಐಟಿ ಮೂಲಗಳು ತಿಳಿಸಿದ್ದಾರೆ.

Related posts

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ನಿವೃತ್ತ ಪಿಡಿಓ ಪೂವಪ್ಪ ಬಂಗೇರ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಜನಾ ಮಂಗಲೋತ್ಸವ ಹಾಗೂ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!