July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

ಬೆಳ್ತಂಗಡಿ : ಕರ್ನಾಟಕದಲ್ಲಿರುವ ಎಲ್ಲಾ ಆಭರಣ ಜ್ಯುವೆಲರಿ ಮಳಿಗೆ ಸಂಸ್ಥೆ ಮೇಲೆ ಅ.31 ರಿಂದ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದ್ದರು. ಬೆಳ್ತಂಗಡಿಯ ಆಭರಣ ಜ್ಯುವೆಲರಿ ಶಾಪ್ ನಲ್ಲಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ನ.4 ಬೆಳಗ್ಗಿನ ಜಾವ 2:30 ಕ್ಕೆ ಬೆಂಗಳೂರು ಐಟಿ ಕಚೇರಿಗೆ ಅಧಿಕಾರಿಗಳು ವಾಪಸ್ ಹೋಗಿದ್ದಾರೆ.

ಬೆಳ್ತಂಗಡಿ ನಗರದ ಸಂತೆಕಟ್ಟೆಯಲ್ಲಿರುವ ಭರಣಿ ಕಟ್ಟಡದಲ್ಲಿರುವ ಆಭರಣ ಚಿನ್ನದ ಮಳಿಗೆ ಮೇಲೆ ಎರಡು ಇನೋವಾ ಕಾರಿನಲ್ಲಿ ಬೆಂಗಳೂರು ಐಟಿ ಕಚೇರಿಯಿಂದ ಬಂದ ಚೈನೈ , ಆಂದ್ರಪ್ರದೇಶ, ತಮಿಳುನಾಡು, ಕೊಚ್ಚಿ ಸೇರಿದಂತೆ ಒಂಭತ್ತು ಜನ ಅಧಿಕಾರಿಗಳು ಅ.31 ರಂದು ಬೆಳಗ್ಗೆ 6 ಗಂಟೆಯಿಂದ ನ.3 ರ ರಾತ್ರಿವರೆಗೆ ಒಟ್ಟು ನಾಲ್ಕು ದಿನ ದಾಳಿ ಮಾಡಿ ಚಿನ್ನಾಭರಣ ಹಾಗೂ ದಾಖಲೆ ಪರಿಶೀಲನೆ ನಡೆಸಿದ್ದರು. ನಾಲ್ಕು ದಿನಗಳಿಂದ ಐಟಿ ದಾಳಿಯಿಂದ ಆಭರಣ ಜ್ಯುವೆಲರಿ ಶಾಪ್ ಬಂದ್ ಮಾಡಿ ಗ್ರಾಹಕರಿಗೆ ಪ್ರವೇಶ ನಿಷೇಧ ಮಾಡಲಾಗಿತ್ತು.

ಉಡುಪಿಯ ಆಭರಣ ಶಾಪ್ ಗಳಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಅಕ್ರಮವಾಗಿ ಶೇಖರಿಸಿಟ್ಟ ಚಿನ್ನದ ಗಟ್ಟಿಯನ್ನು ಐಟಿ ಅಧಿಕಾರಿಗಳಿಗೆ ಪತ್ತೆಯಾಗಿದ್ದು. ಅಲ್ಲಿಯ ದಾಳಿ ಐದನೇ ದಿನಕ್ಕೆ ಮುಂದುವರಿದಿದೆ ಎಂದು ಐಟಿ ಮೂಲಗಳು ತಿಳಿಸಿದ್ದಾರೆ.

Related posts

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya
error: Content is protected !!