25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ( ಕೃಷಿ ಇಲಾಖೆ) ಯಲ್ಲಿ ಅ.31ರಂದು
“ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಮತ್ತು ಕರ್ನಾಟಕ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಲಿಮಿಟೆಡ್ (KREDL) ಸಹಯೋಗದಲ್ಲಿ “ಸ್ಟಾರ್ ಲೇಬಲ್ ಹೊಂದಿರುವ ಮತ್ತು ವಿದ್ಯುತ್ ದಕ್ಷತೆಯುಳ್ಳ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಸುಮಾರು 98 ಜನ ರೈತರು ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದು,, ಪುರುಷ ಮತ್ತು ಮಹಿಳಾ ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳು ದೀಪ ಬೆಳಗಿಸುವ ಮೂಲಕ ತರಬೇತಿ ಪ್ರಾರಂಭಗೊಂಡಿತು. ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಶೈಲಜ ಎ.ಎನ್ ರವರು, ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿದರು.

ಶಿವಮೊಗ್ಗದಿಂದ ( JNNCE | ಡಾ|| ಅಜ್ಜಣ್ಣ, ಉಡುಪಿಯಿಂದ ಡಾ|| ನಾರಾಯಣ ಶೆಣೈ ( MIT) ಹಾಗೂ SDMEC, ಉಜಿರೆಯಿಂದ ಡಾ|| ಸತ್ಯನಾರಾಯಣ, ಡಾ|| ಸುಬ್ರಹ್ಮಣ್ಯ, ಡ| ಕೃಷ್ಣಪ್ರಸಾದ್‌ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರೈತರಿಗೆ ಬಹಳಷ್ಟು ಉಪಯುಕ್ತ ಮಾಹಿತಿ ನೀಡಿದರು. ಅಲ್ಲದೆ ಉಜಿರೆಯ ಶಿವಪ್ರಸಾದ್ ರವರು ಪಂಪ್ ಸೆಟ್ ದುರಸ್ಥಿ ಬಗ್ಗೆ ಪ್ರಾತ್ಯಕ್ಷತೆ ನೀಡಿದರು.

ತರಬೇತಿಯ ಅಂತ್ಯದಲ್ಲಿ ಕೃಷಿ ಅಧಿಕಾರಿ (ಪ್ರಭಾರ) ಆದ ಗಣೇಶ್ ರವರು ವಂದಿಸಿದರು.

Related posts

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಆರಂಬೋಡಿ: ಹೊಕ್ಕಾಡಿಗೋಳಿ ಶಾಲಾ ಶೌಚಾಲಯ ಉದ್ಘಾಟನೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!