22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ( ಕೃಷಿ ಇಲಾಖೆ) ಯಲ್ಲಿ ಅ.31ರಂದು
“ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (BEE) ಮತ್ತು ಕರ್ನಾಟಕ ರಿನ್ಯೂವಬಲ್ ಎನರ್ಜಿ ಡೆವಲಪ್‌ಮೆಂಟ್ ಲಿಮಿಟೆಡ್ (KREDL) ಸಹಯೋಗದಲ್ಲಿ “ಸ್ಟಾರ್ ಲೇಬಲ್ ಹೊಂದಿರುವ ಮತ್ತು ವಿದ್ಯುತ್ ದಕ್ಷತೆಯುಳ್ಳ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಸುಮಾರು 98 ಜನ ರೈತರು ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದು,, ಪುರುಷ ಮತ್ತು ಮಹಿಳಾ ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳು ದೀಪ ಬೆಳಗಿಸುವ ಮೂಲಕ ತರಬೇತಿ ಪ್ರಾರಂಭಗೊಂಡಿತು. ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥರು ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಶೈಲಜ ಎ.ಎನ್ ರವರು, ರೈತರು ಹಾಗೂ ಸಂಪನ್ಮೂಲ ವ್ಯಕ್ತಿಗಳನ್ನು ಸ್ವಾಗತಿಸಿದರು.

ಶಿವಮೊಗ್ಗದಿಂದ ( JNNCE | ಡಾ|| ಅಜ್ಜಣ್ಣ, ಉಡುಪಿಯಿಂದ ಡಾ|| ನಾರಾಯಣ ಶೆಣೈ ( MIT) ಹಾಗೂ SDMEC, ಉಜಿರೆಯಿಂದ ಡಾ|| ಸತ್ಯನಾರಾಯಣ, ಡಾ|| ಸುಬ್ರಹ್ಮಣ್ಯ, ಡ| ಕೃಷ್ಣಪ್ರಸಾದ್‌ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ರೈತರಿಗೆ ಬಹಳಷ್ಟು ಉಪಯುಕ್ತ ಮಾಹಿತಿ ನೀಡಿದರು. ಅಲ್ಲದೆ ಉಜಿರೆಯ ಶಿವಪ್ರಸಾದ್ ರವರು ಪಂಪ್ ಸೆಟ್ ದುರಸ್ಥಿ ಬಗ್ಗೆ ಪ್ರಾತ್ಯಕ್ಷತೆ ನೀಡಿದರು.

ತರಬೇತಿಯ ಅಂತ್ಯದಲ್ಲಿ ಕೃಷಿ ಅಧಿಕಾರಿ (ಪ್ರಭಾರ) ಆದ ಗಣೇಶ್ ರವರು ವಂದಿಸಿದರು.

Related posts

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!