September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

ಮುಂಡಾಜೆ : ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಜಾಗೃತ ಜಾಗೃತಿ ಸಪ್ತಾಹ’ವನ್ನು ಅ.30 ನ.5 ರವರೆಗೆ “ಭ್ರಷ್ಟಾಚಾರಕ್ಕೆ ಬೇಡವೆನ್ನಿ; ರಾಷ್ಟ್ರಕ್ಕೆ ಬದ್ಧರಾಗಿರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಂತ ಆಚರಿಸಲಾಗುತ್ತಿದೆ.


ಈ ನಿಟ್ಟಿನಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿ ‘ಕಾಲೇಜು ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಅರಿವು ಮೂಡಿಸುವುದು, ಮಕ್ಕಳು ದೇಶದ ಭವಿಷ್ಯದ ಆಸ್ತಿಗಳು ಮತ್ತು ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಮುಖ್ಯ’ ಎಂದರು. ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ರೇಂಜರ್ ಲೀಡರ್ ಶ್ರೀಮತಿ ವಸಂತಿ ಪ್ರತಿಜ್ಞಾ ವಿಧಿ ಬೋಧಿಸಿದರು, ವಿದ್ಯಾರ್ಥಿನಿಯರಾದ ಕುಮಾರಿ ವಿಂಧ್ಯಾ ಸ್ವಾಗತಿಸಿ, ಕುಮಾರಿ ಅಂಜಲಿ ವಂದಿಸಿದರು.

Related posts

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲ ಚುನಾವಣೆ

Suddi Udaya

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya
error: Content is protected !!