23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

ಮುಂಡಾಜೆ : ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಜಾಗೃತ ಜಾಗೃತಿ ಸಪ್ತಾಹ’ವನ್ನು ಅ.30 ನ.5 ರವರೆಗೆ “ಭ್ರಷ್ಟಾಚಾರಕ್ಕೆ ಬೇಡವೆನ್ನಿ; ರಾಷ್ಟ್ರಕ್ಕೆ ಬದ್ಧರಾಗಿರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಂತ ಆಚರಿಸಲಾಗುತ್ತಿದೆ.


ಈ ನಿಟ್ಟಿನಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿ ‘ಕಾಲೇಜು ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಅರಿವು ಮೂಡಿಸುವುದು, ಮಕ್ಕಳು ದೇಶದ ಭವಿಷ್ಯದ ಆಸ್ತಿಗಳು ಮತ್ತು ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಮುಖ್ಯ’ ಎಂದರು. ರೋವರ್ ಸ್ಕೌಟ್ ಲೀಡರ್ ಶ್ರೀ ಕೃಷ್ಣ ಕಿರಣ್ ಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ರೇಂಜರ್ ಲೀಡರ್ ಶ್ರೀಮತಿ ವಸಂತಿ ಪ್ರತಿಜ್ಞಾ ವಿಧಿ ಬೋಧಿಸಿದರು, ವಿದ್ಯಾರ್ಥಿನಿಯರಾದ ಕುಮಾರಿ ವಿಂಧ್ಯಾ ಸ್ವಾಗತಿಸಿ, ಕುಮಾರಿ ಅಂಜಲಿ ವಂದಿಸಿದರು.

Related posts

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಹುಣ್ಸೆಕಟ್ಟೆ ಕಡೆಮಾರು ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya
error: Content is protected !!