22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್ ಅವರಿಗೆ ಮಾಹಿತಿ ನೀಡಿದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಪವರ್ ‌ಪ್ರೊಜೆಕ್ಟ್ ನ ಅಧಿಕಾರಿಗಳು ಒಂದು ಕಾರು ಮತ್ತು ಬೈಕ್ ನಲ್ಲಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ವಾಲಿಕೊಂಡು ಬರುತ್ತಿದ್ದ ಟವರ್ ಕಾರು ಹಾಗೂ ಬೈಕ್ ನ ಮೇಲೆಯೇ ಬಿದ್ದಿತ್ತೇನ್ನಲಾಗಿದೆ. ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನ ತುರ್ತು ಸ್ಪಂದನೆ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ. ಟವರ್ ಕುಸಿತದ ಕಾರಣ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾ ಯೋಗಿ ವೇಮನ ಜಯಂತಿ ಆಚರಣೆ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!