30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್ ಅವರಿಗೆ ಮಾಹಿತಿ ನೀಡಿದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಪವರ್ ‌ಪ್ರೊಜೆಕ್ಟ್ ನ ಅಧಿಕಾರಿಗಳು ಒಂದು ಕಾರು ಮತ್ತು ಬೈಕ್ ನಲ್ಲಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ವಾಲಿಕೊಂಡು ಬರುತ್ತಿದ್ದ ಟವರ್ ಕಾರು ಹಾಗೂ ಬೈಕ್ ನ ಮೇಲೆಯೇ ಬಿದ್ದಿತ್ತೇನ್ನಲಾಗಿದೆ. ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನ ತುರ್ತು ಸ್ಪಂದನೆ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ. ಟವರ್ ಕುಸಿತದ ಕಾರಣ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya
error: Content is protected !!