July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

ಮಂಗಳೂರು: ಕೆಲವೇ ತಿಂಗಳಲ್ಲಿ ಬರಲಿರುವ ಲೋಕಸಭೆ ಎಲೆಕ್ಷನ್ ಕಾವು ಜೋರಾಗಿದೆ. ದಿನದಿಂದ ದಿನಕ್ಕೆ ಅಭ್ಯರ್ಥಿಗಳು ಯಾರು ಸಮರ್ಥ ಎಂಬುದರ ಲೆಕ್ಕಾಚಾರದಲ್ಲಿ ಆಯಾ ಪಕ್ಷದವರು ಸನ್ನದ್ಧರಾಗಿದ್ದರೆ. ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಆಯಾ ಕ್ಷೇತ್ರಗಳಲ್ಲಿ ಕುತೂಹಲ ಕೌತುಕ ಹೆಚ್ಚಾಗಿದೆ.


ಲೋಕಸಭಾ ಚುನಾವಣೆಯ 2024 ದ.ಕ. ಜಿಲ್ಲೆಯ ಲೋಕಸಭಾ ಕ್ಷೇತ್ರ ಹಾಗೂ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಗಳು ಯಾರಾಗಬಹುದೆಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಅಷ್ಟೇ ಅಲ್ಲ ದ.ಕ. ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಅಖಾಡ ಒಂದು ರೂಪ ಪಡೆದುಕೊಳ್ಳುತ್ತಿದೆ.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಮ್ಮೆ ಆಯ್ಕೆಯಾಗುವುದು ಪಕ್ಕ. ಸಂಘಟನಾತ್ಮಕವಾಗಿ ನಳಿನ್ ಪ್ರಬಲವಾಗಿರುವುದೇ ಹಾಗೂ ಹೈಕಮಾಂಡ್ ಕೃಪಾಕಟಾಕ್ಷ ಈ ಆಯ್ಕೆಗೆ ಕಾರಣ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಮಂಗಳೂರಿನ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿ ಹಾಲಿ ಎಂಎಲ್ಸಿ ಹರೀಶ್ ಕುಮಾರ್ ಆಯ್ಕೆ ಆಗುವ ಸಾಧ್ಯತೆ ಬಹುತೇಕವಾಗಿ ಎದ್ದು ಕಾಣುತ್ತಿದೆ.

ವಿಧಾನ ಪರಿಷತ್ತಿನಲ್ಲಿ ಜನಸಾಮಾನ್ಯರ ರೆವಿನ್ಯೂ ವಿಷಯಗಳಿಗೆ ಸಂಬಂಧಪಟ್ಟಂತೆ ಹಲವಾರು ಪ್ರಶ್ನೆಗಳನ್ನು ಎತ್ತಿರುವುದು ಹಾಗೂ ಪಕ್ಷದ ಒಳಗೆ ಎಲ್ಲರೊಂದಿಗೆ ಆತ್ಮೀಯತೆಯಿಂದ ಇರುವುದು. ಯಾರೊಂದಿಗೂ ವೈರತ್ವವಿಲ್ಲದ ಹರೀಶ್ ಕುಮಾರ್ ಅವರಿಗೆ ಪ್ಲಸ್ ಪಾಯಿಂಟ್ ಎನ್ನಲಾಗುತ್ತಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಅತ್ಯಂತ ಜನಪ್ರಿಯತೆಯನ್ನು ಕಂಡವರು. ಎಲ್ಲರೊಂದಿಗೆ ಅತ್ಯಂತ ಸರಳತೆಯಿಂದ ಕೂಡಿಕೊಂಡು ಪಕ್ಷವನ್ನ ಬೆಳೆಸಿದ ಹೆಮ್ಮೆ ಕರಾವಳಿಗರಲ್ಲಿ ಕೇಳಿ ಬರುವ ಮಾತು. ಇವರಿಗೆ ಮತ್ತೊಂದು ಪ್ಲಸ್ ಪಾಯಿಂಟ್ ಜಾತಿ ಲೆಕ್ಕಾಚಾರ.
ಬಿಲ್ಲವ ಸಮುದಾಯಕ್ಕೆ ಸೇರಿದ ಇವರು ಪ್ರಬಲ ನಾಯಕನೂ ಹೌದು. ಜಾತಿ ಬೆಂಬಲವೂ ಹರೀಶ್ ಕುಮಾರ್ ಮೇಲಿದೆ. ಹೀಗಿರುವಾಗ ಕಾಂಗ್ರೆಸ್ ನಿಂದ ದ.ಕ. ಜಿಲ್ಲೆ ಲೋಕಸಭಾ ಕ್ಷೇತ್ರಕ್ಕೆ ಹರೀಶ್ ಕುಮಾರ್ ಪ್ರಬಲ ಪೈಪೋಟಿ ಕೊಡಬಲ್ಲ ಅಭ್ಯರ್ಥಿ ಎಂಬುದು ಪಕ್ಕ.
ಈ ಬಾರಿ ಹರೀಶ್ ಕುಮಾರ್ ಅವ್ರನ್ನ ಕಾಂಗ್ರೆಸ್ ದ.ಕ‌. ಲೋಕ ಅಭ್ಯರ್ಥಿಯಾಗಿ ಬಹುತೇಕ ಫೈನಲ್ ಮಾಡುವುದು ಪಕ್ಕ ಆಗಿದೆ.
ಉಡುಪಿ ಚಿಕ್ಕಮಗಳೂರು ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಎರಡು ಪಕ್ಷಗಳು ಗಂಭೀರವಾಗಿ ಪರಿಗಣಿಸಿದ್ದು ರಣತಂತ್ರವನ್ನು ರೂಪಿಸುತ್ತಿವೆ. ಬಂದಿರುವ ಮಾಹಿತಿಗಳ ಪ್ರಕಾರ ಪರಸ್ಪರ ಸ್ಪರ್ಧೆಗೆ ಒಂದು ಹಂತದ ಅಖಾಡ ಸಿದ್ಧವಾಗಿದೆ ಎನ್ನಲಾಗಿದೆ.

Related posts

ವಲಯ ಮಟ್ಟದ ಭಜನಾ ತರಬೇತಿ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ

Suddi Udaya

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!