26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್ ಅವರಿಗೆ ಮಾಹಿತಿ ನೀಡಿದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಪವರ್ ‌ಪ್ರೊಜೆಕ್ಟ್ ನ ಅಧಿಕಾರಿಗಳು ಒಂದು ಕಾರು ಮತ್ತು ಬೈಕ್ ನಲ್ಲಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ವಾಲಿಕೊಂಡು ಬರುತ್ತಿದ್ದ ಟವರ್ ಕಾರು ಹಾಗೂ ಬೈಕ್ ನ ಮೇಲೆಯೇ ಬಿದ್ದಿತ್ತೇನ್ನಲಾಗಿದೆ. ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನ ತುರ್ತು ಸ್ಪಂದನೆ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ. ಟವರ್ ಕುಸಿತದ ಕಾರಣ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಮುಂಡಾಜೆ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya
error: Content is protected !!