29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್ ಅವರಿಗೆ ಮಾಹಿತಿ ನೀಡಿದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಪವರ್ ‌ಪ್ರೊಜೆಕ್ಟ್ ನ ಅಧಿಕಾರಿಗಳು ಒಂದು ಕಾರು ಮತ್ತು ಬೈಕ್ ನಲ್ಲಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ವಾಲಿಕೊಂಡು ಬರುತ್ತಿದ್ದ ಟವರ್ ಕಾರು ಹಾಗೂ ಬೈಕ್ ನ ಮೇಲೆಯೇ ಬಿದ್ದಿತ್ತೇನ್ನಲಾಗಿದೆ. ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನ ತುರ್ತು ಸ್ಪಂದನೆ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ. ಟವರ್ ಕುಸಿತದ ಕಾರಣ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿ ಖಂಡನೀಯ: ಅಭಿನಂದನ್ ಹರೀಶ್ ಕುಮಾರ್

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya
error: Content is protected !!