26.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

ಬೆಳ್ತಂಗಡಿ:ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಬಾಗುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗದ ಸ.ಕಾ.ಇಂಜಿನಿಯರ್ ಕ್ಲೇಮೆಂಟ್ ಬೆಂಜಮಿನ್ ಬ್ರಾಗ್ಸ್ ಅವರಿಗೆ ಮಾಹಿತಿ ನೀಡಿದರು.

ಕೂಡಲೇ ಬೆಂಜಮಿನ್ ಅವರು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಪವರ್ ‌ಪ್ರೊಜೆಕ್ಟ್ ನ ಅಧಿಕಾರಿಗಳು ಒಂದು ಕಾರು ಮತ್ತು ಬೈಕ್ ನಲ್ಲಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ವಾಲಿಕೊಂಡು ಬರುತ್ತಿದ್ದ ಟವರ್ ಕಾರು ಹಾಗೂ ಬೈಕ್ ನ ಮೇಲೆಯೇ ಬಿದ್ದಿತ್ತೇನ್ನಲಾಗಿದೆ. ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ, ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನ ತುರ್ತು ಸ್ಪಂದನೆ ಕಾರಣ ಹೆಚ್ಚಿನ ಅಪಾಯ ಉಂಟಾಗುವುದು ತಪ್ಪಿದೆ. ಟವರ್ ಕುಸಿತದ ಕಾರಣ ಧರ್ಮಸ್ಥಳ ಭಾಗದ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ.

Related posts

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಕಲ್ಮಂಜ: ಸಿದ್ದಬೈಲು ಸ.ಹಿ ಪ್ರಾ. ಶಾಲೆಯ ನಿವೃತ್ತ ಶಿಕ್ಷಕ ಶಂಕರ ಎನ್ ತಾಮನ್ಕರ್ ರವರಿಗೆ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya
error: Content is protected !!