September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

ಮಂಗಳೂರು: ಇತ್ತೀಚೆಗೆ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಖ್ಯಾತ ರಂಗಭೂಮಿ ಕಲಾವಿದ, ನಾಟಕ ರಚನೆಕಾರ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಮಂಗಳೂರಿನ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ವತಿಯಿಂದ ರಂಗಭೂಮಿಯಲ್ಲಿ ಮಾಡಿದ ಮಹಾ ಸಾಧನೆಗಾಗಿ ಕಲಾ ರತ್ನ ಪ್ರಶಸ್ತಿ ನೀಡಿ ನ.4ರಂದು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿದರು.

ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಸಮಾಜದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಮಂಗಳೂರಿನ ಅತ್ತಾವರದಲ್ಲಿ ನಡೆಯಿತು.

ರವಿಚಂದ್ರ ಬಿ ಸಾಲಿಯಾನ್ ವೇಣೂರು ಇವರು ರಂಗಭೂಮಿಯಲ್ಲಿ ಕಳೆದ 35 ವರ್ಷಗಳಿಂದ ತೊಡಗಿಸಿಕೊಂಡು ಸುಮಾರು 30ನಾಟಕಗಳನ್ನು ರಚಿಸಿದ್ದಾರೆ ಇವರ ನಾಟಕಗಳು ಕರಾವಳಿ ಮಾತ್ರವಲ್ಲದೇ, ದೂರದ ಮುಂಬೈಯಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಂಡಿವೆ. ಸ್ತ್ರೀ ಪಾತ್ರದಾರಿಯಾಗಿ ಇವರು ಕರಾವಳಿಯ ನಾಟಕ ರಂಗದಲ್ಲಿ ಅದ್ಬುತ ಸಾಧನೆ ಮಾಡಿರುವ ಇವರಿಗೆ ಅದೆಷ್ಡೋ ಪ್ರಶಸ್ತಿಗಳು ಅರಸಿ ಬಂದಿವೆ.

ವೇಣೂರಿನಲ್ಲಿ ಫಲ್ಗುಣಿ ಕಲಾತಂಡ ಎಂಬ ನಾಟಕ ತಂಡವನ್ನು ಎರಡು ದಶಕಗಳ ಹಿಂದೆ ತನ್ನ ಸ್ನೇಹಿತ ಹೇಮಂತ್ ಕುಮಾರ್ ಭಟ್ ಬಡಕೋಡಿ ಇವರೊಂದಿಗೆ ಕಟ್ಟಿ ಆ ತಂಡದ ಮೂಲಕ ಜಿಲ್ಲೆಯಾದ್ಯಂತ ಕಲಾ ಸೇವೆ ನೀಡುತ್ತಿದ್ದಾರೆ.

Related posts

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಉಚಿತ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya
error: Content is protected !!