March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆಯ ಬಳಿಯಲ್ಲಿ ನಗರ ಪಂಚಾಯತಕ್ಕೆ ಸೇರಿದ ಒಳಚರಂಡಿಗೆ ದನವೊಂದು ಬಿದ್ದು ಮೇಲೆ ಹತ್ತಲಾಗದೆ ಒದ್ದಾಡಿದ ಘಟನೆ ಇಂದು ನಡೆದಿದ್ದು, ನಂತರ ಬೆಳ್ತಂಗಡಿ ಅಗ್ನಿಶಾಮದ ದಳವದವರ ಸಹಕಾರದಿಂದ ದನವನ್ನು ಮೇಲೆತ್ತಲಾಯಿತು.


ಬೆಳ್ತಂಗಡಿ ನಗರದ ಒಳಗಚರಂಡಿ ಕೃಷಿ ಇಲಾಖೆ ಬಳಿಯಿಂದ ಹಾದುಹೋಗಿದ್ದು, ಒಳಚರಂಡಿಯ ಮೇಲ್ಗಡೆ ಸ್ಲೇಫ್ ಹಾಕದೆ ಹಲವು ವರ್ಷಗಳು ಕಳೆದಿದೆ. ಒಳಚರಂಡಿ ಓಪನ್ ಆಗಿದ್ದು, ಇಂದು ಬೆಳಿಗ್ಗೆ ಬೀಡಾಡಿ ದನವೊಂದು ಮೇಯುತ್ತಾ ಬಂದು ಒಳಚರಂಡಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಮೇಲೆ ಹತ್ತಲಾಗದೆ ಒದ್ದಾಡುತ್ತಿದ್ದ ದನವನ್ನು ಕಂಡು ಸ್ಥಳೀಯರು ಕೃಷಿ ಇಲಾಖೆಯವರ ಹಾಗೂ ನಗರ ಪಂಚಾಯತದ ಗಮನಕ್ಕೆ ತಂದಿದ್ದರು. ಬಳಿಕ ಬೆಳ್ತಂಗಡಿ ಅಗ್ನಿಶಾಮಕದವರಿಗೆ ಮಾಹಿತಿ ನೀಡಿ, ಅವರು ಸ್ಥಳಕ್ಕೆ ಆಗಮಿಸಿ, ಜೆಸಿಬಿ ಮೂಲಕ ಒಳಚರಂಡಿಯಲ್ಲಿ ಸಿಲುಕಿಕೊಂಡಿದ್ದ ದನವನ್ನು ಮೇಲೆತ್ತಲಾಯಿತು. ಇಲ್ಲಿ ಈಗಾಗಲೇ ಮೂರ‍್ನಾಲ್ಕು ಇಂತಹ ಘಟನೆಗಳು ಈಗಾಗಲೇ ನಡೆದಿದೆ. ಕೃಷಿ ಇಲಾಖೆಯ ಅಧಿಕಾರಿಗಳು ನ.ಪಂ ಸದಸ್ಯ ಜಗದೀಶ್, ನ.ಪಂ ಕರುಣಾಕರ್ ಮತ್ತಿತರರು ಉಪಸ್ಥಿತರಿದ್ದರು. ಒಳಚರಂಡಿಗೆ ಮೇಲ್ಗಡೆ ಸ್ಲಾಬ್ ಹಾಕಲು 15ನೇ ಹಣಕಾಸು ಯೋಜನೆಯಲ್ಲಿ ಅನುದಾನ ಇಡಲಾಗಿದ್ದು, ಟೆಂಡರ್ ಹಂತದಲ್ಲಿದೆ. ಇದರ ಕಾಮಗಾರಿ ಶೀಘ್ರವಾಗಿ ನಡೆಯಲಿದೆ ಎಂದು ಜಗದೀಶ್ ಡಿ. ತಿಳಿಸಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!