25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆಯ ಬಳಿಯಲ್ಲಿ ನಗರ ಪಂಚಾಯತಕ್ಕೆ ಸೇರಿದ ಒಳಚರಂಡಿಗೆ ದನವೊಂದು ಬಿದ್ದು ಮೇಲೆ ಹತ್ತಲಾಗದೆ ಒದ್ದಾಡಿದ ಘಟನೆ ಇಂದು ನಡೆದಿದ್ದು, ನಂತರ ಬೆಳ್ತಂಗಡಿ ಅಗ್ನಿಶಾಮದ ದಳವದವರ ಸಹಕಾರದಿಂದ ದನವನ್ನು ಮೇಲೆತ್ತಲಾಯಿತು.


ಬೆಳ್ತಂಗಡಿ ನಗರದ ಒಳಗಚರಂಡಿ ಕೃಷಿ ಇಲಾಖೆ ಬಳಿಯಿಂದ ಹಾದುಹೋಗಿದ್ದು, ಒಳಚರಂಡಿಯ ಮೇಲ್ಗಡೆ ಸ್ಲೇಫ್ ಹಾಕದೆ ಹಲವು ವರ್ಷಗಳು ಕಳೆದಿದೆ. ಒಳಚರಂಡಿ ಓಪನ್ ಆಗಿದ್ದು, ಇಂದು ಬೆಳಿಗ್ಗೆ ಬೀಡಾಡಿ ದನವೊಂದು ಮೇಯುತ್ತಾ ಬಂದು ಒಳಚರಂಡಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಮೇಲೆ ಹತ್ತಲಾಗದೆ ಒದ್ದಾಡುತ್ತಿದ್ದ ದನವನ್ನು ಕಂಡು ಸ್ಥಳೀಯರು ಕೃಷಿ ಇಲಾಖೆಯವರ ಹಾಗೂ ನಗರ ಪಂಚಾಯತದ ಗಮನಕ್ಕೆ ತಂದಿದ್ದರು. ಬಳಿಕ ಬೆಳ್ತಂಗಡಿ ಅಗ್ನಿಶಾಮಕದವರಿಗೆ ಮಾಹಿತಿ ನೀಡಿ, ಅವರು ಸ್ಥಳಕ್ಕೆ ಆಗಮಿಸಿ, ಜೆಸಿಬಿ ಮೂಲಕ ಒಳಚರಂಡಿಯಲ್ಲಿ ಸಿಲುಕಿಕೊಂಡಿದ್ದ ದನವನ್ನು ಮೇಲೆತ್ತಲಾಯಿತು. ಇಲ್ಲಿ ಈಗಾಗಲೇ ಮೂರ‍್ನಾಲ್ಕು ಇಂತಹ ಘಟನೆಗಳು ಈಗಾಗಲೇ ನಡೆದಿದೆ. ಕೃಷಿ ಇಲಾಖೆಯ ಅಧಿಕಾರಿಗಳು ನ.ಪಂ ಸದಸ್ಯ ಜಗದೀಶ್, ನ.ಪಂ ಕರುಣಾಕರ್ ಮತ್ತಿತರರು ಉಪಸ್ಥಿತರಿದ್ದರು. ಒಳಚರಂಡಿಗೆ ಮೇಲ್ಗಡೆ ಸ್ಲಾಬ್ ಹಾಕಲು 15ನೇ ಹಣಕಾಸು ಯೋಜನೆಯಲ್ಲಿ ಅನುದಾನ ಇಡಲಾಗಿದ್ದು, ಟೆಂಡರ್ ಹಂತದಲ್ಲಿದೆ. ಇದರ ಕಾಮಗಾರಿ ಶೀಘ್ರವಾಗಿ ನಡೆಯಲಿದೆ ಎಂದು ಜಗದೀಶ್ ಡಿ. ತಿಳಿಸಿದ್ದಾರೆ.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya
error: Content is protected !!