ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಉಜಿರೆ: ಸ್ಪೇಸ್ ಮೀಡಿಯಾ, ಅದನಿ ಗ್ರೂಪ್ ಆಫ್ ಕಂಪನಿ ಅರ್ಪಿಸುವ ಗಾಂಧಿ ಸ್ಮೃತಿ, ನಮ್ಮ ನಡೆ ಗಾಂಧಿ‌ ತತ್ವದೆಡೆ ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರು ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023 ಆಯ್ಕೆಯಾಗಿದ್ದಾರೆ.

ಬೆಂಗಳೂರು ಗಾಂಧಿ ಭವನದಲ್ಲಿ ಇಂದು ನ.6 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ
ಕರ್ನಾಟಕ ಸರಕಾರದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾಗಿ ಹಲವಾರು ಉಪಯುಕ್ತ ಸೇವೆ ಸಲ್ಲಿಸಿದರ ಫಲವಾಗಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Leave a Comment

error: Content is protected !!