22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ವಿವೇಕ ಶಾಲಾ ಯೋಜನೆಯ ಅಡಿಯಲ್ಲಿ 2022-23ರಲ್ಲಿ ಮಂಜೂರಾದ ಆರು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ. 6 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಂದ ನೆರವೇರಿಸಿ ಮಾತನಾಡಿ ಬೆಳ್ತಂಗಡಿಯ ಹೃದಯ ಭಾಗದಲ್ಲಿರುವ ಈ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಹಿಂದಿನಂತೆಯೆ ಮುಂದೆಯೂ ಸಹ ತಮ್ಮ ಸಹಕಾರ ಯಾವಾಗಲೂ ಇರುವುದಾಗಿ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮೋಹನ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನೀನಾ ಕುಮಾರ್, ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯರು, ಕಟ್ಟಡದ ಕಂಟ್ರಾಕ್ಟರ್ ಅಬ್ದುಲ್ ರಜಾಕ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಟ್ಟಡ ಮಂಜೂರಾತಿಯಲ್ಲಿ ಶಾಸಕರ ನೆರವನ್ನು ನೆನೆದು ಅವರಿಗೆ ಕಿರು ಸನ್ಮಾನವನ್ನು ಮಾಡಲಾಯಿತು. ಹಾಗೆ ಕ್ಲಪ್ತ ವೇಳೆಯಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿದ ಕಂಟ್ರಾಕ್ಟರ್ ಅವರಿಗೂ ಕಿರು ಕಾಣಿಕೆಯನ್ನು ನೀಡಲಾಯಿತು.

ಈ ಸಮಯದಲ್ಲಿ ವಿಶೇಷ ಚೇತನವುಳ್ಳ ಮಕ್ಕಳಿಗೆ ಇಲಾಖಾ ವತಿಯಿಂದ ಕೊಡ ಮಾಡಲ್ಪಡುವ ಸಾಧಾರಣ ಸಲಕರಣೆಗಳನ್ನು ಶಾಸಕರು ವಿತರಿಸಿದರು. BIERT ಜಗದೀಶ್ ರವರು ಈ ಮಕ್ಕಳಿಗೆ ಸಿಗುವ ಸೌಲತ್ತುಗಳ ಬಗ್ಗೆ ವಿವರಿಸಿದರು. ಇಲಾಖಾ ಪರವಾಗಿ ಶ್ರೀಮತಿ ತಾರಕೇಸರಿರವರು ಶುಭವನ್ನು ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ವಿದ್ಯಾ ಶೆಣೈ ವಂದನಾರ್ಪಣೆ ಮಾಡಿ ಶಿಕ್ಷಕಿ ಶುಭಾರವರು ನಿರೂಪಿಸಿದರು.

Related posts

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಭಗೀರಥ ಜಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ಚಂದ್ರ ಡಿ.ಕೆ ಆಯ್ಕೆ

Suddi Udaya
error: Content is protected !!