25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ವಿವೇಕ ಶಾಲಾ ಯೋಜನೆಯ ಅಡಿಯಲ್ಲಿ 2022-23ರಲ್ಲಿ ಮಂಜೂರಾದ ಆರು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ. 6 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಂದ ನೆರವೇರಿಸಿ ಮಾತನಾಡಿ ಬೆಳ್ತಂಗಡಿಯ ಹೃದಯ ಭಾಗದಲ್ಲಿರುವ ಈ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಹಿಂದಿನಂತೆಯೆ ಮುಂದೆಯೂ ಸಹ ತಮ್ಮ ಸಹಕಾರ ಯಾವಾಗಲೂ ಇರುವುದಾಗಿ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮೋಹನ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನೀನಾ ಕುಮಾರ್, ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯರು, ಕಟ್ಟಡದ ಕಂಟ್ರಾಕ್ಟರ್ ಅಬ್ದುಲ್ ರಜಾಕ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಟ್ಟಡ ಮಂಜೂರಾತಿಯಲ್ಲಿ ಶಾಸಕರ ನೆರವನ್ನು ನೆನೆದು ಅವರಿಗೆ ಕಿರು ಸನ್ಮಾನವನ್ನು ಮಾಡಲಾಯಿತು. ಹಾಗೆ ಕ್ಲಪ್ತ ವೇಳೆಯಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿದ ಕಂಟ್ರಾಕ್ಟರ್ ಅವರಿಗೂ ಕಿರು ಕಾಣಿಕೆಯನ್ನು ನೀಡಲಾಯಿತು.

ಈ ಸಮಯದಲ್ಲಿ ವಿಶೇಷ ಚೇತನವುಳ್ಳ ಮಕ್ಕಳಿಗೆ ಇಲಾಖಾ ವತಿಯಿಂದ ಕೊಡ ಮಾಡಲ್ಪಡುವ ಸಾಧಾರಣ ಸಲಕರಣೆಗಳನ್ನು ಶಾಸಕರು ವಿತರಿಸಿದರು. BIERT ಜಗದೀಶ್ ರವರು ಈ ಮಕ್ಕಳಿಗೆ ಸಿಗುವ ಸೌಲತ್ತುಗಳ ಬಗ್ಗೆ ವಿವರಿಸಿದರು. ಇಲಾಖಾ ಪರವಾಗಿ ಶ್ರೀಮತಿ ತಾರಕೇಸರಿರವರು ಶುಭವನ್ನು ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ವಿದ್ಯಾ ಶೆಣೈ ವಂದನಾರ್ಪಣೆ ಮಾಡಿ ಶಿಕ್ಷಕಿ ಶುಭಾರವರು ನಿರೂಪಿಸಿದರು.

Related posts

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!