22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

ಮಂಗಳೂರು: ಇತ್ತೀಚೆಗೆ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಖ್ಯಾತ ರಂಗಭೂಮಿ ಕಲಾವಿದ, ನಾಟಕ ರಚನೆಕಾರ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಮಂಗಳೂರಿನ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ವತಿಯಿಂದ ರಂಗಭೂಮಿಯಲ್ಲಿ ಮಾಡಿದ ಮಹಾ ಸಾಧನೆಗಾಗಿ ಕಲಾ ರತ್ನ ಪ್ರಶಸ್ತಿ ನೀಡಿ ನ.4ರಂದು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿದರು.

ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಸಮಾಜದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಮಂಗಳೂರಿನ ಅತ್ತಾವರದಲ್ಲಿ ನಡೆಯಿತು.

ರವಿಚಂದ್ರ ಬಿ ಸಾಲಿಯಾನ್ ವೇಣೂರು ಇವರು ರಂಗಭೂಮಿಯಲ್ಲಿ ಕಳೆದ 35 ವರ್ಷಗಳಿಂದ ತೊಡಗಿಸಿಕೊಂಡು ಸುಮಾರು 30ನಾಟಕಗಳನ್ನು ರಚಿಸಿದ್ದಾರೆ ಇವರ ನಾಟಕಗಳು ಕರಾವಳಿ ಮಾತ್ರವಲ್ಲದೇ, ದೂರದ ಮುಂಬೈಯಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಂಡಿವೆ. ಸ್ತ್ರೀ ಪಾತ್ರದಾರಿಯಾಗಿ ಇವರು ಕರಾವಳಿಯ ನಾಟಕ ರಂಗದಲ್ಲಿ ಅದ್ಬುತ ಸಾಧನೆ ಮಾಡಿರುವ ಇವರಿಗೆ ಅದೆಷ್ಡೋ ಪ್ರಶಸ್ತಿಗಳು ಅರಸಿ ಬಂದಿವೆ.

ವೇಣೂರಿನಲ್ಲಿ ಫಲ್ಗುಣಿ ಕಲಾತಂಡ ಎಂಬ ನಾಟಕ ತಂಡವನ್ನು ಎರಡು ದಶಕಗಳ ಹಿಂದೆ ತನ್ನ ಸ್ನೇಹಿತ ಹೇಮಂತ್ ಕುಮಾರ್ ಭಟ್ ಬಡಕೋಡಿ ಇವರೊಂದಿಗೆ ಕಟ್ಟಿ ಆ ತಂಡದ ಮೂಲಕ ಜಿಲ್ಲೆಯಾದ್ಯಂತ ಕಲಾ ಸೇವೆ ನೀಡುತ್ತಿದ್ದಾರೆ.

Related posts

ಬೆಳ್ತಂಗಡಿಯಲ್ಲಿ “ಧರ್ಮ ವಿಜಯ ಸಮಾವೇಶ”ದ ಸಿದ್ಧತೆ ಬಗ್ಗೆ ಗಣ್ಯರ ಸಮಾಲೋಚನಾ ಸಭೆ: ಸೆ.5 ಕ್ಕೆ ಧರ್ಮಸ್ಥಳದಲ್ಲಿ ಉಭಯ ಜಿಲ್ಲಾ ಧರ್ಮಕ್ಷೇತ್ರಗಳ ಮುಖ್ಯಸ್ಥರ ಸಮಾವೇಶ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya
error: Content is protected !!