April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

ಮಂಗಳೂರು: ಇತ್ತೀಚೆಗೆ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಖ್ಯಾತ ರಂಗಭೂಮಿ ಕಲಾವಿದ, ನಾಟಕ ರಚನೆಕಾರ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಮಂಗಳೂರಿನ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ವತಿಯಿಂದ ರಂಗಭೂಮಿಯಲ್ಲಿ ಮಾಡಿದ ಮಹಾ ಸಾಧನೆಗಾಗಿ ಕಲಾ ರತ್ನ ಪ್ರಶಸ್ತಿ ನೀಡಿ ನ.4ರಂದು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿದರು.

ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಸಮಾಜದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಮಂಗಳೂರಿನ ಅತ್ತಾವರದಲ್ಲಿ ನಡೆಯಿತು.

ರವಿಚಂದ್ರ ಬಿ ಸಾಲಿಯಾನ್ ವೇಣೂರು ಇವರು ರಂಗಭೂಮಿಯಲ್ಲಿ ಕಳೆದ 35 ವರ್ಷಗಳಿಂದ ತೊಡಗಿಸಿಕೊಂಡು ಸುಮಾರು 30ನಾಟಕಗಳನ್ನು ರಚಿಸಿದ್ದಾರೆ ಇವರ ನಾಟಕಗಳು ಕರಾವಳಿ ಮಾತ್ರವಲ್ಲದೇ, ದೂರದ ಮುಂಬೈಯಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಂಡಿವೆ. ಸ್ತ್ರೀ ಪಾತ್ರದಾರಿಯಾಗಿ ಇವರು ಕರಾವಳಿಯ ನಾಟಕ ರಂಗದಲ್ಲಿ ಅದ್ಬುತ ಸಾಧನೆ ಮಾಡಿರುವ ಇವರಿಗೆ ಅದೆಷ್ಡೋ ಪ್ರಶಸ್ತಿಗಳು ಅರಸಿ ಬಂದಿವೆ.

ವೇಣೂರಿನಲ್ಲಿ ಫಲ್ಗುಣಿ ಕಲಾತಂಡ ಎಂಬ ನಾಟಕ ತಂಡವನ್ನು ಎರಡು ದಶಕಗಳ ಹಿಂದೆ ತನ್ನ ಸ್ನೇಹಿತ ಹೇಮಂತ್ ಕುಮಾರ್ ಭಟ್ ಬಡಕೋಡಿ ಇವರೊಂದಿಗೆ ಕಟ್ಟಿ ಆ ತಂಡದ ಮೂಲಕ ಜಿಲ್ಲೆಯಾದ್ಯಂತ ಕಲಾ ಸೇವೆ ನೀಡುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಸಂದೇಶ್ ಮದ್ದಡ್ಕ ಇವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya
error: Content is protected !!