September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

ಮಂಗಳೂರು: ಇತ್ತೀಚೆಗೆ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗೌರವಕ್ಕೆ ಪಾತ್ರರಾಗಿದ್ದ ಖ್ಯಾತ ರಂಗಭೂಮಿ ಕಲಾವಿದ, ನಾಟಕ ರಚನೆಕಾರ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಮಂಗಳೂರಿನ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ವತಿಯಿಂದ ರಂಗಭೂಮಿಯಲ್ಲಿ ಮಾಡಿದ ಮಹಾ ಸಾಧನೆಗಾಗಿ ಕಲಾ ರತ್ನ ಪ್ರಶಸ್ತಿ ನೀಡಿ ನ.4ರಂದು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಸನ್ಮಾನಿಸಿದರು.

ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಮತ್ತು ಆಕ್ಸಿಸ್ ಬ್ಯಾಂಕ್ ಸಮಾಜದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಮಂಗಳೂರಿನ ಅತ್ತಾವರದಲ್ಲಿ ನಡೆಯಿತು.

ರವಿಚಂದ್ರ ಬಿ ಸಾಲಿಯಾನ್ ವೇಣೂರು ಇವರು ರಂಗಭೂಮಿಯಲ್ಲಿ ಕಳೆದ 35 ವರ್ಷಗಳಿಂದ ತೊಡಗಿಸಿಕೊಂಡು ಸುಮಾರು 30ನಾಟಕಗಳನ್ನು ರಚಿಸಿದ್ದಾರೆ ಇವರ ನಾಟಕಗಳು ಕರಾವಳಿ ಮಾತ್ರವಲ್ಲದೇ, ದೂರದ ಮುಂಬೈಯಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಂಡಿವೆ. ಸ್ತ್ರೀ ಪಾತ್ರದಾರಿಯಾಗಿ ಇವರು ಕರಾವಳಿಯ ನಾಟಕ ರಂಗದಲ್ಲಿ ಅದ್ಬುತ ಸಾಧನೆ ಮಾಡಿರುವ ಇವರಿಗೆ ಅದೆಷ್ಡೋ ಪ್ರಶಸ್ತಿಗಳು ಅರಸಿ ಬಂದಿವೆ.

ವೇಣೂರಿನಲ್ಲಿ ಫಲ್ಗುಣಿ ಕಲಾತಂಡ ಎಂಬ ನಾಟಕ ತಂಡವನ್ನು ಎರಡು ದಶಕಗಳ ಹಿಂದೆ ತನ್ನ ಸ್ನೇಹಿತ ಹೇಮಂತ್ ಕುಮಾರ್ ಭಟ್ ಬಡಕೋಡಿ ಇವರೊಂದಿಗೆ ಕಟ್ಟಿ ಆ ತಂಡದ ಮೂಲಕ ಜಿಲ್ಲೆಯಾದ್ಯಂತ ಕಲಾ ಸೇವೆ ನೀಡುತ್ತಿದ್ದಾರೆ.

Related posts

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಶಿಶಿಲ : ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ ನಿಧನ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya
error: Content is protected !!