April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆಯ ಬಳಿಯಲ್ಲಿ ನಗರ ಪಂಚಾಯತಕ್ಕೆ ಸೇರಿದ ಒಳಚರಂಡಿಗೆ ದನವೊಂದು ಬಿದ್ದು ಮೇಲೆ ಹತ್ತಲಾಗದೆ ಒದ್ದಾಡಿದ ಘಟನೆ ಇಂದು ನಡೆದಿದ್ದು, ನಂತರ ಬೆಳ್ತಂಗಡಿ ಅಗ್ನಿಶಾಮದ ದಳವದವರ ಸಹಕಾರದಿಂದ ದನವನ್ನು ಮೇಲೆತ್ತಲಾಯಿತು.


ಬೆಳ್ತಂಗಡಿ ನಗರದ ಒಳಗಚರಂಡಿ ಕೃಷಿ ಇಲಾಖೆ ಬಳಿಯಿಂದ ಹಾದುಹೋಗಿದ್ದು, ಒಳಚರಂಡಿಯ ಮೇಲ್ಗಡೆ ಸ್ಲೇಫ್ ಹಾಕದೆ ಹಲವು ವರ್ಷಗಳು ಕಳೆದಿದೆ. ಒಳಚರಂಡಿ ಓಪನ್ ಆಗಿದ್ದು, ಇಂದು ಬೆಳಿಗ್ಗೆ ಬೀಡಾಡಿ ದನವೊಂದು ಮೇಯುತ್ತಾ ಬಂದು ಒಳಚರಂಡಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಮೇಲೆ ಹತ್ತಲಾಗದೆ ಒದ್ದಾಡುತ್ತಿದ್ದ ದನವನ್ನು ಕಂಡು ಸ್ಥಳೀಯರು ಕೃಷಿ ಇಲಾಖೆಯವರ ಹಾಗೂ ನಗರ ಪಂಚಾಯತದ ಗಮನಕ್ಕೆ ತಂದಿದ್ದರು. ಬಳಿಕ ಬೆಳ್ತಂಗಡಿ ಅಗ್ನಿಶಾಮಕದವರಿಗೆ ಮಾಹಿತಿ ನೀಡಿ, ಅವರು ಸ್ಥಳಕ್ಕೆ ಆಗಮಿಸಿ, ಜೆಸಿಬಿ ಮೂಲಕ ಒಳಚರಂಡಿಯಲ್ಲಿ ಸಿಲುಕಿಕೊಂಡಿದ್ದ ದನವನ್ನು ಮೇಲೆತ್ತಲಾಯಿತು. ಇಲ್ಲಿ ಈಗಾಗಲೇ ಮೂರ‍್ನಾಲ್ಕು ಇಂತಹ ಘಟನೆಗಳು ಈಗಾಗಲೇ ನಡೆದಿದೆ. ಕೃಷಿ ಇಲಾಖೆಯ ಅಧಿಕಾರಿಗಳು ನ.ಪಂ ಸದಸ್ಯ ಜಗದೀಶ್, ನ.ಪಂ ಕರುಣಾಕರ್ ಮತ್ತಿತರರು ಉಪಸ್ಥಿತರಿದ್ದರು. ಒಳಚರಂಡಿಗೆ ಮೇಲ್ಗಡೆ ಸ್ಲಾಬ್ ಹಾಕಲು 15ನೇ ಹಣಕಾಸು ಯೋಜನೆಯಲ್ಲಿ ಅನುದಾನ ಇಡಲಾಗಿದ್ದು, ಟೆಂಡರ್ ಹಂತದಲ್ಲಿದೆ. ಇದರ ಕಾಮಗಾರಿ ಶೀಘ್ರವಾಗಿ ನಡೆಯಲಿದೆ ಎಂದು ಜಗದೀಶ್ ಡಿ. ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!