22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

ಬೆಳ್ತಂಗಡಿ: ಇಲ್ಲಿಯ ಕೃಷಿ ಇಲಾಖೆಯ ಬಳಿಯಲ್ಲಿ ನಗರ ಪಂಚಾಯತಕ್ಕೆ ಸೇರಿದ ಒಳಚರಂಡಿಗೆ ದನವೊಂದು ಬಿದ್ದು ಮೇಲೆ ಹತ್ತಲಾಗದೆ ಒದ್ದಾಡಿದ ಘಟನೆ ಇಂದು ನಡೆದಿದ್ದು, ನಂತರ ಬೆಳ್ತಂಗಡಿ ಅಗ್ನಿಶಾಮದ ದಳವದವರ ಸಹಕಾರದಿಂದ ದನವನ್ನು ಮೇಲೆತ್ತಲಾಯಿತು.


ಬೆಳ್ತಂಗಡಿ ನಗರದ ಒಳಗಚರಂಡಿ ಕೃಷಿ ಇಲಾಖೆ ಬಳಿಯಿಂದ ಹಾದುಹೋಗಿದ್ದು, ಒಳಚರಂಡಿಯ ಮೇಲ್ಗಡೆ ಸ್ಲೇಫ್ ಹಾಕದೆ ಹಲವು ವರ್ಷಗಳು ಕಳೆದಿದೆ. ಒಳಚರಂಡಿ ಓಪನ್ ಆಗಿದ್ದು, ಇಂದು ಬೆಳಿಗ್ಗೆ ಬೀಡಾಡಿ ದನವೊಂದು ಮೇಯುತ್ತಾ ಬಂದು ಒಳಚರಂಡಿಗೆ ಆಕಸ್ಮಿಕವಾಗಿ ಬಿದ್ದಿತ್ತು. ಮೇಲೆ ಹತ್ತಲಾಗದೆ ಒದ್ದಾಡುತ್ತಿದ್ದ ದನವನ್ನು ಕಂಡು ಸ್ಥಳೀಯರು ಕೃಷಿ ಇಲಾಖೆಯವರ ಹಾಗೂ ನಗರ ಪಂಚಾಯತದ ಗಮನಕ್ಕೆ ತಂದಿದ್ದರು. ಬಳಿಕ ಬೆಳ್ತಂಗಡಿ ಅಗ್ನಿಶಾಮಕದವರಿಗೆ ಮಾಹಿತಿ ನೀಡಿ, ಅವರು ಸ್ಥಳಕ್ಕೆ ಆಗಮಿಸಿ, ಜೆಸಿಬಿ ಮೂಲಕ ಒಳಚರಂಡಿಯಲ್ಲಿ ಸಿಲುಕಿಕೊಂಡಿದ್ದ ದನವನ್ನು ಮೇಲೆತ್ತಲಾಯಿತು. ಇಲ್ಲಿ ಈಗಾಗಲೇ ಮೂರ‍್ನಾಲ್ಕು ಇಂತಹ ಘಟನೆಗಳು ಈಗಾಗಲೇ ನಡೆದಿದೆ. ಕೃಷಿ ಇಲಾಖೆಯ ಅಧಿಕಾರಿಗಳು ನ.ಪಂ ಸದಸ್ಯ ಜಗದೀಶ್, ನ.ಪಂ ಕರುಣಾಕರ್ ಮತ್ತಿತರರು ಉಪಸ್ಥಿತರಿದ್ದರು. ಒಳಚರಂಡಿಗೆ ಮೇಲ್ಗಡೆ ಸ್ಲಾಬ್ ಹಾಕಲು 15ನೇ ಹಣಕಾಸು ಯೋಜನೆಯಲ್ಲಿ ಅನುದಾನ ಇಡಲಾಗಿದ್ದು, ಟೆಂಡರ್ ಹಂತದಲ್ಲಿದೆ. ಇದರ ಕಾಮಗಾರಿ ಶೀಘ್ರವಾಗಿ ನಡೆಯಲಿದೆ ಎಂದು ಜಗದೀಶ್ ಡಿ. ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಟ್ರಸ್ಟ್ ವತಿಯಿಂದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಮತ್ತು ಸೈನಿಕರ ಸುರಕ್ಷತೆಗಾಗಿ ವಿಶೇಷ ಭಜನೆ ಮತ್ತು ಭಾರತ ಮಾತೆಗೆ ಪೂಜಾ ಕಾರ್ಯಕ್ರಮ

Suddi Udaya

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!