37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ವಿವೇಕ ಶಾಲಾ ಯೋಜನೆಯ ಅಡಿಯಲ್ಲಿ 2022-23ರಲ್ಲಿ ಮಂಜೂರಾದ ಆರು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ. 6 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಂದ ನೆರವೇರಿಸಿ ಮಾತನಾಡಿ ಬೆಳ್ತಂಗಡಿಯ ಹೃದಯ ಭಾಗದಲ್ಲಿರುವ ಈ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಹಿಂದಿನಂತೆಯೆ ಮುಂದೆಯೂ ಸಹ ತಮ್ಮ ಸಹಕಾರ ಯಾವಾಗಲೂ ಇರುವುದಾಗಿ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮೋಹನ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನೀನಾ ಕುಮಾರ್, ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯರು, ಕಟ್ಟಡದ ಕಂಟ್ರಾಕ್ಟರ್ ಅಬ್ದುಲ್ ರಜಾಕ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಟ್ಟಡ ಮಂಜೂರಾತಿಯಲ್ಲಿ ಶಾಸಕರ ನೆರವನ್ನು ನೆನೆದು ಅವರಿಗೆ ಕಿರು ಸನ್ಮಾನವನ್ನು ಮಾಡಲಾಯಿತು. ಹಾಗೆ ಕ್ಲಪ್ತ ವೇಳೆಯಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿದ ಕಂಟ್ರಾಕ್ಟರ್ ಅವರಿಗೂ ಕಿರು ಕಾಣಿಕೆಯನ್ನು ನೀಡಲಾಯಿತು.

ಈ ಸಮಯದಲ್ಲಿ ವಿಶೇಷ ಚೇತನವುಳ್ಳ ಮಕ್ಕಳಿಗೆ ಇಲಾಖಾ ವತಿಯಿಂದ ಕೊಡ ಮಾಡಲ್ಪಡುವ ಸಾಧಾರಣ ಸಲಕರಣೆಗಳನ್ನು ಶಾಸಕರು ವಿತರಿಸಿದರು. BIERT ಜಗದೀಶ್ ರವರು ಈ ಮಕ್ಕಳಿಗೆ ಸಿಗುವ ಸೌಲತ್ತುಗಳ ಬಗ್ಗೆ ವಿವರಿಸಿದರು. ಇಲಾಖಾ ಪರವಾಗಿ ಶ್ರೀಮತಿ ತಾರಕೇಸರಿರವರು ಶುಭವನ್ನು ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ವಿದ್ಯಾ ಶೆಣೈ ವಂದನಾರ್ಪಣೆ ಮಾಡಿ ಶಿಕ್ಷಕಿ ಶುಭಾರವರು ನಿರೂಪಿಸಿದರು.

Related posts

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
error: Content is protected !!