25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ವಿವೇಕ ಶಾಲಾ ಯೋಜನೆಯ ಅಡಿಯಲ್ಲಿ 2022-23ರಲ್ಲಿ ಮಂಜೂರಾದ ಆರು ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ನ. 6 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಂದ ನೆರವೇರಿಸಿ ಮಾತನಾಡಿ ಬೆಳ್ತಂಗಡಿಯ ಹೃದಯ ಭಾಗದಲ್ಲಿರುವ ಈ ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವಲ್ಲಿ ಹಿಂದಿನಂತೆಯೆ ಮುಂದೆಯೂ ಸಹ ತಮ್ಮ ಸಹಕಾರ ಯಾವಾಗಲೂ ಇರುವುದಾಗಿ ಭರವಸೆಯನ್ನು ನೀಡಿದರು.

ವೇದಿಕೆಯಲ್ಲಿ ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿರವರು, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಮೋಹನ್ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ವಾರಿಜಾ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನೀನಾ ಕುಮಾರ್, ಮುಖ್ಯ ಶಿಕ್ಷಕರಾದ ಸೂರ್ಯನಾರಾಯಣ ಪುತ್ತೂರಾಯರು, ಕಟ್ಟಡದ ಕಂಟ್ರಾಕ್ಟರ್ ಅಬ್ದುಲ್ ರಜಾಕ್ ರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಟ್ಟಡ ಮಂಜೂರಾತಿಯಲ್ಲಿ ಶಾಸಕರ ನೆರವನ್ನು ನೆನೆದು ಅವರಿಗೆ ಕಿರು ಸನ್ಮಾನವನ್ನು ಮಾಡಲಾಯಿತು. ಹಾಗೆ ಕ್ಲಪ್ತ ವೇಳೆಯಲ್ಲಿ ಕಟ್ಟಡವನ್ನು ಪೂರ್ಣಗೊಳಿಸಿದ ಕಂಟ್ರಾಕ್ಟರ್ ಅವರಿಗೂ ಕಿರು ಕಾಣಿಕೆಯನ್ನು ನೀಡಲಾಯಿತು.

ಈ ಸಮಯದಲ್ಲಿ ವಿಶೇಷ ಚೇತನವುಳ್ಳ ಮಕ್ಕಳಿಗೆ ಇಲಾಖಾ ವತಿಯಿಂದ ಕೊಡ ಮಾಡಲ್ಪಡುವ ಸಾಧಾರಣ ಸಲಕರಣೆಗಳನ್ನು ಶಾಸಕರು ವಿತರಿಸಿದರು. BIERT ಜಗದೀಶ್ ರವರು ಈ ಮಕ್ಕಳಿಗೆ ಸಿಗುವ ಸೌಲತ್ತುಗಳ ಬಗ್ಗೆ ವಿವರಿಸಿದರು. ಇಲಾಖಾ ಪರವಾಗಿ ಶ್ರೀಮತಿ ತಾರಕೇಸರಿರವರು ಶುಭವನ್ನು ಹಾರೈಸಿದರು.

ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಶಿಕ್ಷಕಿ ವಿದ್ಯಾ ಶೆಣೈ ವಂದನಾರ್ಪಣೆ ಮಾಡಿ ಶಿಕ್ಷಕಿ ಶುಭಾರವರು ನಿರೂಪಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya
error: Content is protected !!